Home » Bengaluru : ಮದುವೆ ಕಾಗದ ಹಂಚುವಾಗ ಟ್ರ್ಯಾಕ್ಟರ್ ಡಿಕ್ಕಿ- ಮದುಮಗ ಸಾವು

Bengaluru : ಮದುವೆ ಕಾಗದ ಹಂಚುವಾಗ ಟ್ರ್ಯಾಕ್ಟರ್ ಡಿಕ್ಕಿ- ಮದುಮಗ ಸಾವು

0 comments

Bengaluru : ಮನುಷ್ಯರ ಜೀವನದಲ್ಲಿ ವಿಧಿ ಯಾವೆಲ್ಲ ರೀತಿ ಆಟವಾಡುತ್ತದೆ ಎಂದು ಹೇಳಲು ಸಾಧ್ಯವೇ ಇಲ್ಲ. ಇದೀಗ ಬೆಂಗಳೂರಿನಲ್ಲಿ ನಡೆದ ಘಟನೆಯನ್ನು ಕೇಳಿದರೆ ಎಂಥವರ ಕಣ್ಣಲ್ಲೂ ಕಣ್ಣೀರು ಬರುತ್ತದೆ. ಏಕೆಂದರೆ ತನ್ನ ಮದುವೆಯ ಕಾಗದವನ್ನು ಹಂಚಲು ಹೋದ ಯುವಕ ಟ್ರ್ಯಾಕ್ಟರ್ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನ ಹುಳಿಮಾವು ಬಳಿ ಈ ಘಟನೆ ನಡೆದಿದೆ. 28 ವರ್ಷದ ಅಕ್ಷತ್ ಮೃತಪಟ್ಟ ಯುವಕ. ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ನಡೆದಿತ್ತು. ಈ ರಥೋತ್ಸವದ ಸಂದರ್ಭದಲ್ಲಿ ಅಕ್ಷಯ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿದೆ. ಇವಳೆ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

You may also like