Home » ಕುಕ್ಕೆ ಸುಬ್ರಹ್ಮಣ್ಯ ಕುಮಾರಾಧಾರ ನದಿಯಲ್ಲಿ ಮುಳುಗಿ ಇಬ್ಬರ ಸಾವು

ಕುಕ್ಕೆ ಸುಬ್ರಹ್ಮಣ್ಯ ಕುಮಾರಾಧಾರ ನದಿಯಲ್ಲಿ ಮುಳುಗಿ ಇಬ್ಬರ ಸಾವು

0 comments 1 mins read

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಹರಿಪ್ರಸಾದ್‌ (40), ಸುಜೀತ್‌ ಗೋಳಿಯಾಡಿ (26) ಮೃತರು. ಈ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುಗ್ರಹ ಎಂಟರ್‌ಪ್ರೈಸಸ್‌ ಹಾರ್ಡ್‌ವೇರ್‌ ಅಂಗಡಿಯ ಮಾಲಕರಾಗಿದ್ದ ಹರಿಪ್ರಸಾದ್‌ ಹಾಗೂ ಅದೇ ಅಂಗಡಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸುಜೀತ್‌ ತಮ್ಮ ಪರಿಚಿತರ ಜೊತೆ 10 ಮಂದಿಯ ಜೊತೆ ಕುಮಾರಧಾರ ನದಿಯ ಬಳಿ ವನಭೋಜಕ್ಕೆ ತೆರಳಿದ್ದರು ಎಂದು ವರದಿಯಾಗಿದೆ.

ಮಧ್ಯಾಹ್ನ ಊಟದ ನಂತರ ಸ್ನಾನಕ್ಕೆಂದು ನದಿಗೆ ಇಳಿದ ಸಂದರ್ಭದಲ್ಲಿ 2.30 ರ ವೇಳೆಗೆ ಈ ಘಟನೆ ನಡೆದಿದ್ದು, ಹರಿಪ್ರಸಾದ್‌ ಹಾಗೂ ಸುಜೀತ್‌ ನೀರಿನ ಆಳಕ್ಕೆ ಸಿಲುಕಿ ಮುಳುಗಿದ್ದಾರೆ ಎನ್ನಲಾಗಿದೆ.

ಘಟನೆ ಕುರಿತು ಮಾಹಿತಿ ಪಡೆದ ಕುಕ್ಕೆ ಸುಬ್ರಹ್ಮಣ್ಯ ಠಾಣೆಯ ಪೊಲೀಸರು ಸ್ಥಳಕ್ಕೆ ಬಂದಿದ್ದು, ಪರಿಶೀಲನೆ ಮಾಡಿದ್ದು, ಮೃತದೇಹಗಳನ್ನು ಹೊರತೆಗೆದು ಮುಂದಿನ ಕ್ರಮ ಕೈಗೊಂಡಿರುವ ಕುರಿತು ವರದಿಯಾಗಿದೆ.

banner

You may also like