Home » ಉಡುಪಿ: ವಸತಿಗೃಹದಲ್ಲಿ ಯಾತ್ರಾರ್ಥಿ ಕುರ್ಚಿಯಲ್ಲಿ ಕುಳಿತ ಸ್ಥಿತಿಯಲ್ಲೇ ಸಾವು

ಉಡುಪಿ: ವಸತಿಗೃಹದಲ್ಲಿ ಯಾತ್ರಾರ್ಥಿ ಕುರ್ಚಿಯಲ್ಲಿ ಕುಳಿತ ಸ್ಥಿತಿಯಲ್ಲೇ ಸಾವು

0 comments
Death News

ಉಡುಪಿ: ಹಳೆ ಸರಕಾರಿ ಬಸ್ಸು ನಿಲ್ದಾಣದ ಬಳಿ ಇರುವ ವಸತಿಗೃಹದಲ್ಲಿ ಯಾತ್ರಾರ್ಥಿಯೊಬ್ಬರು ಕುರ್ಚಿಯಲ್ಲಿ ಕುಳಿತ ಸ್ಥಿತಿಯಲ್ಲಿಯೇ ಸಾವಿಗೀಡಾದ ಘಟನೆ ನಡೆದಿದೆ.

ವ್ಯಕ್ತಿ ಕೊಠಡಿಯಿಂದ ಹೊರಬರದಿರುವುದನ್ನು ಕಂಡು ಸಂಶಯಗೊಂಡ ಲಾಡ್ಜ್‌ನ ಸಿಬ್ಬಂದಿ ಸಂಶಯಪಟ್ಟು ಬಾಗಿಲು ತೆರೆದು ನೋಡಿದಾಗ ವ್ಯಕ್ತಿ ಮೃತಪಟ್ಟಿರುವುದು ತಿಳಿದು ಬಂದಿದೆ.

ದಾವಣಗೆರೆಯ ನಿವಾಸಿ ಮಹಾಂತೇಶ ಎಂ.ಜಿ. ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ಹೋಗುವುದಾಗಿ ಹೇಳಿ ಬಂದಿರುವುದಾಗಿ ವರದಿಯಾಗಿದೆ. ಕಾನೂನು ಪ್ರಕ್ರಿಯೆಯನ್ನು ಮೃತನ ಹೆಂಡತಿ ಹಾಗೂ ಅಣ್ಣನ ಸಮಕ್ಷಮದಲ್ಲಿ ಮಾಡಲಾಯಿತು. ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ನೆರವಾಗಿದ್ದು, ಸಾವಿಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಅನಾರೋಗ್ಯದ ಕಾರಣದಿಂದ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

banner

You may also like