ವಿಟ್ಲ: ಶಿಕ್ಷಕರ ಜೊತೆ ಈಜಲು ತೆರಳಿದ್ದ ಸಂದರ್ಭದಲ್ಲಿ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.


ವಿಟ್ಲ ಕಾಶಿಮಠ ನಿವಾಸಿ ಗೋವರ್ಧನ್ ಎಂಬುವವರ ಪುತ್ರ ಅನಿಕೇತನ್ (13) ಮೃತ ಬಾಲಕ.
ಕೊಪ್ಪದಲ್ಲಿರುವ ಸತ್ಯಸಾಯಿ ವಿದ್ಯಾಸಂಸ್ಥೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿದ್ದ ಅನಿಕೇತ್ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದು, ಈ ವೇಳೆ ಶಿಕ್ಷಕರೊಂದಿಗೆ ಈಜಲು ತೆರಳಿದಾಗ ಸಂಜೆ ಸುಮಾರು 2 ಗಂಟೆ ವೇಳೆಗೆ ಅನಿಕೇತ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಜಯಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

