Mudabidre: ಬರುವ ಮಾರ್ಚ್ 20, 21 ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ಮೂಡಬಿದೆಯ ಆಳ್ವಾಸ್ ಕಾಲೇಜಿನಲ್ಲಿ ‘ಭಾಷಾ ವೈವಿಧ್ಯತೆ ಮತ್ತು ದಕ್ಷಿಣ ಭಾರತದ ಅಸ್ಮಿತೆ’ ಎಂಬ ವಿಚಾರದ ಕುರಿತು ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ.

ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗ, ಕನ್ನಡ ವಿಶ್ವವಿದ್ಯಾಲಯ ಹಂಪಿ, ಕನ್ನಡ ವಿಭಾಗ ಆಳ್ವಾಸ್ ಕಾಲೇಜು(ಸ್ವಾಯತ್ತ ) ಮೂಡಬಿದಿರೆ, ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಮಂಗಳೂರು ಇವರ ಸಹಯೋಗದಲ್ಲಿ ಮೂಡಬಿದ್ರೆಯ ಆಳ್ವಾಸ್ ವಿದ್ಯಾಗಿರಿಯಲ್ಲಿ ‘ಭಾಷಾ ವೈವಿಧ್ಯತೆ ಮತ್ತು ದಕ್ಷಿಣ ಭಾರತದ ಅಸ್ಮಿತೆ’ ಎಂಬ ವಿಚಾರವಾಗಿ 2 ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಡಿ ವಿ ಪರಮಶಿವಮೂರ್ತಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕನ್ನಡದ ಹಿರಿಯ ಚಿಂತಕರು ಹಾಗೂ ಕನ್ನಡ ಭಾಷಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬೆಳಿಮಲೆಯವರು ದಿಕ್ಸೂಚಿ ಭಾಷಣವನ್ನು ಮಾಡಲಿದ್ದಾರೆ. ನಂತರದಲ್ಲಿ ಎರಡು ದಿನಗಳ ಕಾಲ ಮೂರು ಗೋಷ್ಠಿಗಳು ನಡೆಯಲಿದ್ದು, ದಕ್ಷಿಣ ಭಾರತದಲ್ಲಿರುವ ಭಾಷೆಗಳ ವಿವಿಧ ವಿಚಾರಗಳ ಕುರಿತು ನಾಡಿನ 8 ವಿದ್ವಾಂಸರಗಳು ತಮ್ಮ ವಿಚಾರವನ್ನು ಮಂಡಿಸಲಿದ್ದಾರೆ.
ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಎ ಸುಬ್ಬಣ್ಣರೈ ಇವರ ಅಧ್ಯಕ್ಷತೆಯಲ್ಲಿ ಸಮಾನಾಂತರ ಗೋಷ್ಠಿಯೂ ಕೂಡ ನಡೆಯಲಿದ್ದು ಸುಮಾರು 20ಕ್ಕೂ ವಿದ್ವಾಂಸರುಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಡಿನ ಕ್ಯಾತ ಲೇಖಕರು ಚಿಂತಕರು ಅದ ನರೇಂದ್ರ ರೈ ದೇರ್ಲ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಶೋಧನಾರ್ಥಿಗಳು ಹಾಗೂ ಕರಾವಳಿ ಭಾಗದ ಕೆಲವು ಹಿರಿಯ ವಿದ್ವಾಂಸರಗಳು ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ವಿಚಾರ ಸಂಕಿರಣದ ಆಯೋಜಕರು, ಹಂಪಿ ಕನ್ನಡ ವಿವಿಯ ಹಿರಿಯ ಪ್ರಾಧ್ಯಾಪಕರಾದ ಡಾ. ಮಾಧವ ಪೆರಾಜೆ ಇವರು ತಿಳಿಸಿದ್ದಾರೆ.

