HomeEducationವಿಧ್ಯಾರ್ಥಿಗಳ ಗಮನಕ್ಕೆ; ನಾಳೆನಡೆಯಬೇಕಿದ್ದ ವಿವಿ ಪರೀಕ್ಷೆ ಮುಂದೂಡಿಕೆ

ವಿಧ್ಯಾರ್ಥಿಗಳ ಗಮನಕ್ಕೆ; ನಾಳೆನಡೆಯಬೇಕಿದ್ದ ವಿವಿ ಪರೀಕ್ಷೆ ಮುಂದೂಡಿಕೆ

Hindu neighbor gifts plot of land

Hindu neighbour gifts land to Muslim journalist

ರಾಜ್ಯ ಸರ್ಕಾರ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ನಾಳೆ ಘೋಷಿಸಿದೆ. ಈ ಹಿನ್ನಲೆಯಲ್ಲಿ ನಾಳೆ ನಡೆಯಬೇಕಿದ್ದಂತ ಮೈಸೂರು ವಿಶ್ವವಿದ್ಯಾಲಯ ಮತ್ತು ಕುವೆಂಪು ವಿಶ್ವವಿದ್ಯಾಲಯದ ಸ್ನಾತಕ ಪದವಿ ಹಾಗು ಕಾನೂನು ಪದವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮೈಸೂರು ವಿಶ್ವವಿದ್ಯಾಲಯ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 02-05-2022ರಂದು ರಂಜಾನ್ ಹಬ್ಬದ ಪ್ರಯುಕ್ತ ಶಾಲಾ-ಕಾಲೇಜುಗಳಿಗೆ ರಜೆ  ಘೋಷಿಸಲಾಗಿದೆ. ಹೀಗಾಗಿ ಈ ದಿನದಂದು ನಡೆಯಬೇಕಿದ್ದ ಮೈಸೂರು ವಿಶ್ವವಿದ್ಯಾಲಯ ಸ್ನಾತಕ ಪದವಿ, ಎನ್‌ಇಪಿ ಮೊದಲ ಸೆಮಿಸ್ಟ್ ಮತ್ತು ಇನ್ನಿತರ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದೆ. ನಾಳೆ ನಿಗದಿಯಾಗಿದ್ದಂತ ಪರೀಕ್ಷೆಗಳನ್ನು ದಿನಾಂಕ 07-05-2022ರಂದು ನಡೆಸಲಾಗುವುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದೆ.

ಅದೇ ರೀತಿ ಕುವೆಂಪು ವಿಶ್ವವಿದ್ಯಾಲಯದ ಎಲ್ಲ ಸ್ನಾತಕ ಪದವಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ರಾಜ್ಯ ಸರ್ಕಾರ ಮೇ 2 ರಂದು ರಂಜಾನ್ ರಜೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಸೋಮವಾರ ನಿಗದಿಯಾಗಿದ್ದ ಕುವೆಂಪು ವಿವಿಯ ಎಲ್ಲ ಸ್ನಾತಕ ಪದವಿ ಪರೀಕ್ಷೆ ಮುಂದೂಡಲಾಗಿದೆ. ನಾಳೆ ನಡೆಯಬೇಕಿದ್ದ ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.ಕೆ. ನವೀನ್ ಕುಮಾರ್ ತಿಳಿಸಿದ್ದಾರೆ.

RELATED ARTICLES

Most Popular

Recent Comments