Home Education ಪಠ್ಯಪುಸ್ತಕದಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕ ಹೆಡಗೇವಾರ್ ಭಾಷಣ ಸೇರ್ಪಡೆ !! | ಸ್ಫೂರ್ತಿದಾಯಕ ಸಿದ್ಧಾಂತವನ್ನು ಯಾವುದೇ ಕಾರಣಕ್ಕೂ...

ಪಠ್ಯಪುಸ್ತಕದಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕ ಹೆಡಗೇವಾರ್ ಭಾಷಣ ಸೇರ್ಪಡೆ !! | ಸ್ಫೂರ್ತಿದಾಯಕ ಸಿದ್ಧಾಂತವನ್ನು ಯಾವುದೇ ಕಾರಣಕ್ಕೂ ತೆಗೆದುಹಾಕುವ ಪ್ರಶ್ನೆಯೇ ಇಲ್ಲ- ಶಿಕ್ಷಣ ಸಚಿವ ಬಿ.ಸಿ ನಾಗೇಶ್

Hindu neighbor gifts plot of land

Hindu neighbour gifts land to Muslim journalist

ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷ ನಿನ್ನೆ ಅದ್ಧೂರಿಯಾಗಿ ಆರಂಭವಾಗಿದೆ. ಲವಲವಿಕೆಯಿಂದ ಮಕ್ಕಳು ತರಗತಿಗೆ ಹಾಜರಾಗಿದ್ದಾರೆ. ಹೀಗಿರುವಾಗ ಹತ್ತನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರ ಭಾಷಣವನ್ನು ಸೇರಿಸಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದ್ದು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇದನ್ನು ಸಮರ್ಥಿಸಿಕೊಂಡಿದ್ದಾರೆ.

ಆರ್‌ಎಸ್‌ಎಸ್ ಸಿದ್ಧಾಂತ ಉತ್ತೇಜಿಸುವುದರ ಮೇಲೆ ನಮ್ಮ ಗಮನ ಕೇಂದ್ರೀಕೃತವಾಗಿದೆ. ಇದರಿಂದ ವಿದ್ಯಾರ್ಥಿಗಳು ದೇಶಭಕ್ತಿ ಮತ್ತು ರಾಷ್ಟ್ರೀಯತೆಯಿಂದ ಸ್ಫೂರ್ತಿ ಪಡೆಯಬಹುದು. ನಮ್ಮ ನಡೆಯನ್ನು ಟೀಕಿಸುವವರು ಮೊದಲು ವಿಷಯವನ್ನು ಪರಿಶೀಲಿಸಿ, ನಂತರ ಚರ್ಚೆಗೆ ಬರಲಿ ಎಂದು ಅವರು ಹೇಳಿದ್ದಾರೆ.

ಪಠ್ಯಪುಸ್ತಕದಲ್ಲಿ ಹೆಡಗೇವಾರ್ ಭಾಷಣ ಇರುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಅದನ್ನು ತೆಗೆಯುವ ಪ್ರಶ್ನೆಯೇ ಇಲ್ಲ. ಪುಸ್ತಕ ಈಗಾಗಲೇ ಮುದ್ರಣಕ್ಕೆ ಹೋಗಿದೆ. ಯುವ ಮನಸ್ಸುಗಳು ಕೇವಲ ವ್ಯಕ್ತಿಗಳನ್ನು ಆದರ್ಶವಾಗಿ ತೆಗೆದುಕೊಳ್ಳುವ ಬದಲು ಸ್ಫೂರ್ತಿದಾಯಕವಾದ ಸಿದ್ಧಾಂತವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.

ಭಗತ್ ಸಿಂಗ್ ಕುರಿತ ವಿಷಯವನ್ನು ಪಠ್ಯಪುಸ್ತಕಗಳಿಂದ ತೆಗೆದುಹಾಕಲಾಗಿದೆ ಎಂಬುದು ಸುಳ್ಳು, ಕೆಲವರು ಪಠ್ಯಪುಸ್ತಕಗಳಲ್ಲಿ ತಮ್ಮದೇ ಆದ ಸಿದ್ಧಾಂತವನ್ನು ಸೇರಿಸಲು ಬಯಸುತ್ತಿರುವುದರಿಂದ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.