Home Entertainment 17ನೇ ಬೆಂಗಳೂರು ಚಿತ್ರೋತ್ಸವದಲ್ಲಿ ತಾಯಿ-ಮಗನ ಸಂಬಂಧದ ʼಅಮ್ಮಂಗೆ ಹೇಳ್ಬೇಡʼ ಚಿತ್ರ ಪ್ರದರ್ಶನ

17ನೇ ಬೆಂಗಳೂರು ಚಿತ್ರೋತ್ಸವದಲ್ಲಿ ತಾಯಿ-ಮಗನ ಸಂಬಂಧದ ʼಅಮ್ಮಂಗೆ ಹೇಳ್ಬೇಡʼ ಚಿತ್ರ ಪ್ರದರ್ಶನ

Hindu neighbor gifts plot of land

Hindu neighbour gifts land to Muslim journalist

‘ನನ್ನ ಚೊಚ್ಚಲ ನಿರ್ದೇಶನದ ಈ ಚಿತ್ರವು 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳುತ್ತಿರುವುದು ನನಗೆ ಹೆಮ್ಮೆಯ ವಿಷಯ. ಇದು ವಿಶ್ವದಾದ್ಯಂತ ಹಾಗೂ ಭಾರತದ ವಿವಿಧ ಭಾಗಗಳ ಸಿನಿಮೀಯ ಧ್ವನಿಗಳನ್ನು ಸಂಭ್ರಮಿಸುವ ವೇದಿಕೆಯಾಗಿದೆ’ ಎಂದು ‘ಅಮ್ಮಂಗೆ ಹೇಳ್ಬೇಡ’ (Don’t Tell Mother) ಚಿತ್ರದ ನಿರ್ದೇಶಕ ಅನೂಪ್ ಲೋಕ್ಕೂರ್ ತಿಳಿಸಿದ್ದಾರೆ.

‘ಅಮ್ಮಂಗೆ ಹೇಳ್ಬೇಡ’ ಚಲನಚಿತ್ರದ ಬಗ್ಗೆ ಮಾತನಾಡಿದ ಅವರು, ‘ಈ ಕಥೆಯು ತಮ್ಮನ್ನು 1990ರ ದಶಕದ ಬೆಂಗಳೂರಿನ ಬಾಲ್ಯದ ದಿನಗಳಿಗೆ, ಅಂದರೆ ಶಾಲೆಯ ತರಗತಿಗಳು ಮತ್ತು ಕುಟುಂಬದ ಆಪ್ತ ಕ್ಷಣಗಳಿಗೆ ಕೊಂಡೊಯ್ಯುತ್ತದೆ ಎಂದು ಸ್ಮರಿಸಿದ್ದಾರೆ. ಈ ಚಿತ್ರ ಕನ್ನಡ ಸ್ಪರ್ಧಾತ್ಮಕ ವಿಭಾಗದಲ್ಲಿ ಪ್ರದರ್ಶನಗೊಳ್ಳುತ್ತಿದೆ. ಈ ಚಿತ್ರವು ಒಂಬತ್ತು ವರ್ಷದ ಬಾಲಕ ಆಕಾಶ್‌ನ ಜೀವನವನ್ನು ಆಧರಿಸಿದೆ. ಶಾಲೆಯಲ್ಲಿ ಅನುಭವಿಸಿದ ಶಿಕ್ಷೆಯ ಗುರುತುಗಳನ್ನು ಮುಚ್ಚಿಟ್ಟುಕೊಂಡು, ತನ್ನ ಕುಟುಂಬದ ಭಾವನಾತ್ಮಕ ಸಮತೋಲನವನ್ನು ಕಾಪಾಡಲು ಆತ ಪಡುವ ಶ್ರಮ ಹಾಗೂ ಭಯ, ಪ್ರೀತಿ ಮತ್ತು ಜವಾಬ್ದಾರಿಗಳ ನಡುವೆ ಆತ ಸಾಗುವ ಪಯಣವನ್ನು ಈ ಸಿನಿಮಾ ಸುಂದರವಾಗಿ ಚಿತ್ರಿಸುತ್ತದೆ. ಆಕಾಶ್ ಪಾತ್ರದಲ್ಲಿ ಸಿದ್ಧಾರ್ಥ್ ಸ್ವರೂಪ್ ನಟಿಸಿದ್ದು, ತಮ್ಮ ಮುಗ್ಧತೆ ಮತ್ತು ಬಲವಾದ ಅಭಿನಯದ ಮೂಲಕ ಚಿತ್ರಕ್ಕೆ ಜೀವ ತುಂಬಿದ್ದಾರೆ. ಅನಿರುದ್ಧ್ ಪಿ. ಕೇಸರ್‌ಕರ್ ಬಾಲಕನ ತಮ್ಮನ ಪಾತ್ರದಲ್ಲಿ ಕಾಣಿಸಿಕೊಂಡರೆ, ಐಶ್ವರ್ಯ ದಿನೇಶ್ ಮತ್ತು ಕಾರ್ತಿಕ್ ನಾಗರಾಜನ್ ಪೋಷಕರ ಪಾತ್ರದಲ್ಲಿ ಅದ್ಭುತವಾಗಿ ನಟಿಸಿ ಕುಟುಂಬದ ಸಂಘರ್ಷಗಳಿಗೆ ಭಾವನಾತ್ಮಕ ಸ್ಪರ್ಶ ನೀಡಿದ್ದಾರೆ’ ಎಂದು ಹೇಳಿದರು.

ಈ ಸಿನಿಮಾ ಕೇವಲ ವೈಯಕ್ತಿಕ ಗತಕಾಲದ ಪ್ರತಿಬಿಂಬವಲ್ಲ, ಬದಲಿಗೆ ಪ್ರೇಕ್ಷಕರು ತಮ್ಮ ಬಾಲ್ಯದ ನೆನಪುಗಳನ್ನು ಮತ್ತು ಕುಟುಂಬದ ಅಲಿಖಿತ ಕಥೆಗಳನ್ನು ಮರುಶೋಧಿಸುವಂತೆ ಮಾಡುತ್ತದೆ ಎಂದ ಅನೂಪ್ ಲೋಕ್ಕೂರ್‌, ʼಕಥೆ ಹೇಳುವ ಕಲೆಯನ್ನು ಗೌರವಿಸುವ ಇಂತಹ ದೊಡ್ಡ ಚಿತ್ರೋತ್ಸವದಲ್ಲಿ, ತಾವು ಬೆಳೆದ ಪರಿಸರ ಮತ್ತು ಜೀವನದ ಲಯವನ್ನು ಬಿಂಬಿಸುವ ಚಿತ್ರವನ್ನು ಬೆಳ್ಳಿತೆರೆಯ ಮೇಲೆ ನೋಡುವುದು ಒಬ್ಬ ನಿರ್ದೇಶಕನಾಗಿ ತಮಗೆ ಅತ್ಯಂತ ಭಾವುಕ ಮತ್ತು ಸಂತಸದ ಕ್ಷಣʼ ಎಂದರು.