Home Breaking Entertainment News Kannada Kantara Movie : ವರಾಹ ರೂಪಂ ಹಾಡಿಗೆ ಕೇರಳ ಹೈಕೋರ್ಟ್ ತಡೆಯಾಜ್ಞೆ | ಗ್ರೀನ್ ಸಿಗ್ನಲ್...

Kantara Movie : ವರಾಹ ರೂಪಂ ಹಾಡಿಗೆ ಕೇರಳ ಹೈಕೋರ್ಟ್ ತಡೆಯಾಜ್ಞೆ | ಗ್ರೀನ್ ಸಿಗ್ನಲ್ ನೀಡಿದ್ದ ಜಿಲ್ಲಾಕೋರ್ಟ್ ಆದೇಶಕ್ಕೆ ತಡೆ!

Hindu neighbor gifts plot of land

Hindu neighbour gifts land to Muslim journalist

ಕಾಂತಾರ ಸಿನಿಮಾದ ʻವರಾಹಂ ರೂಪಂʼ (Kantara Movie) ಹಾಡಿನ ವಿವಾದಕ್ಕೆ ಸಂಬಂಧಿಸಿ ತೈಕುಡಂ ಬ್ರಿಡ್ಜ್ ಮ್ಯೂಸಿಕ್ ತಂಡ ಹೂಡಿದ್ದ ದೂರನ್ನು ತಿರಸ್ಕರಿಸಿದ್ದ ಕೋಯಿಕ್ಕೋಡ್ (ಕಲ್ಲಿಕೋಟೆ) ನ್ಯಾಯಾಲಯದ ಆದೇಶಕ್ಕೆ ಗುರುವಾರ ಕೇರಳ ಹೈಕೋರ್ಟ್‌ ತಡೆ ನೀಡಿದ್ದು, ಈಗ ಕಾಂತಾರ ಚಿತ್ರ ತಂಡಕ್ಕೆ ಹಿನ್ನಡೆ ಆದಂತಾಗಿದೆ.

ಕಾಂತಾರ ಸಿನಿಮಾಗಿದ್ದ ದೊಡ್ದ ಸಮಸ್ಯೆ ಇತ್ತೀಚೆಗಷ್ಟೆ ಅಂತ್ಯ ಕಂಡಿದೆ ಎಂದುಕೊಳ್ಳಲಾಗಿತ್ತು. ಆದರೆ , ವರಾಹ ರೂಪಂ ಹಾಡಿಗೆ ಎದುರಾಗಿದ್ದ ಸಮಸ್ಯೆ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಹೌದು!! ವರಾಹ ರೂಪಂ ಹಾಡನ್ನು ಪ್ರಸಾರ ಮಾಡಬಹುದು ಎಂದು ಜಿಲ್ಲಾ ಕೋರ್ಟ್ ಆದೇಶಿಸಿದ ಬೆನ್ನಲ್ಲೆ, ಇದೀಗ ಕೇರಳ ಹೈ ಕೋರ್ಟ್ ತಡೆಯಾಜ್ಞೆ ನೀಡಿದೆ. ʼನವರಸಂʼನ ಹಕ್ಕುಸ್ವಾಮ್ಯ ಹೊಂದಿರುವ ಮಾತೃಭೂಮಿ ಪ್ರಿಂಟಿಂಗ್‌ ಮತ್ತು ಪಬ್ಲಿಷಿಂಗ್‌ ಕಂಪೆನಿ ಲಿಮಿಟೆಡ್‌ ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲು ಮಾಡಲಾಗಿತ್ತು . ಆರಂಭದಲ್ಲಿ ʼವರಾಹ ರೂಪಂʼ ಗೀತೆಯನ್ನು ಸಿನಿಮಾ, ಚಿತ್ರಮಂದಿರ ಮತ್ತು ಸ್ಟ್ರೀಮಿಂಗ್‌ ವೇದಿಕೆಯಲ್ಲಿ ಬಳಸಕೂಡದಂತೆ ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯ ಮತ್ತು ಕೋಳಿಕ್ಕೋಡ್ (ಕಲ್ಲಿಕೋಟೆ) ಜಿಲ್ಲಾ ನ್ಯಾಯಾಲಯಗಳು ತಾತ್ಕಾಲಿಕ ಆದೇಶ ಕೂಡ ನೀಡಿತ್ತು.

ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯ ಮತ್ತು ಕೋಳಿಕ್ಕೋಡ್ (ಕಲ್ಲಿಕೋಟೆ) ಜಿಲ್ಲಾ ನ್ಯಾಯಾಲಯವು ಕಾಂತಾರ ಸಿನಿಮಾದ ‘ವರಾಹ ರೂಪಂ’ ಹಾಡಿನ ಬಳಕೆಯನ್ನು ಮಾಡದಂತೆ ಮಧ್ಯಂತರ ತಡೆಯಾಜ್ಞೆ ಆದೇಶ ನೀಡಿದ ಬೆನ್ನಲ್ಲೇ, ಇದರ ವಿರುದ್ಧ ಹೊಂಬಾಳೆ ಫಿಲ್ಮ್ಸ್‌ ಸಲ್ಲಿಸಿದ ಅರ್ಜಿಯನ್ನು ಕೇರಳ ಹೈಕೋರ್ಟ್ ನವೆಂಬರ್‌ 23ರಂದು ಬುಧವಾರ ವಜಾಗೊಳಿಸಿದೆ.

ಪರ್ಯಾಯ ಕಾನೂನು ಪರಿಹಾರ ಪಡೆಯುವುದಕ್ಕೆ ಅರ್ಜಿದಾರರು ಸ್ವತಂತ್ರರು ಎಂದು ನ್ಯಾಯಪೀಠ ಈ ಸಂದರ್ಭ ಹೇಳಿದೆ. ಅಧೀನ ನ್ಯಾಯಾಲಯಗಳು ನೀಡಿದ ಮಧ್ಯಂತರ ಆದೇಶದಲ್ಲಿ ಆ ನ್ಯಾಯಾಲಯದ ಮೇಲ್ವಿಚಾರಣಾ ಅಧಿಕಾರ ವ್ಯಾಪ್ತಿಯಲ್ಲಿ ನಾವು ಮಧ್ಯಸ್ಥಿಕೆ ವಹಿಸುವುದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತ ಪಡಿಸಿದ್ದರು. ಒಂದು ವೇಳೆ ಆದೇಶ ನೀಡಿದರೆ ಮೂಲ ನ್ಯಾಯವ್ಯಾಪ್ತಿಯ ನ್ಯಾಯಾಲಯಗಳು ಮತ್ತು ಮೇಲ್ಮನವಿ ನ್ಯಾಯಾಲಯಗಳು ನಿಷ್ಕ್ರಿಯವಾಗುತ್ತವೆ ಎಂದು ಅರ್ಜಿಯನ್ನು ವಜಾಗೊಳಿಸಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ ಸೋಮರಾಜನ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಹೊಂಬಾಳೆ ಫಿಲ್ಮ್ಸ್‌, ರಿಷಬ್‌ ಶೆಟ್ಟಿ, ಪೃಥ್ವಿರಾಜ್‌ ಫಿಲ್ಮ್ಸ್‌, ಅಮೆಜಾನ್‌ ಸೆಲ್ಲರ್‌ ಸರ್ವೀಸ್‌ ಪ್ರೈವೇಟ್‌ ಲಿಮಿಟೆಡ್‌, ಗೂಗಲ್‌ ಇಂಡಿಯಾ ಪ್ರಧಾನ ಕಚೇರಿ, ಸ್ಪಾಟಿಫೈ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌, ಪೃಥ್ವಿರಾಜ್‌ ಸುಕುಮಾರನ್‌ ಮತ್ತು ಇತರರಿಗೆ ನೋಟಿಸ್‌ ಜಾರಿ ಮಾಡಿದೆ ಎನ್ನಲಾಗಿದೆ.

ʻವರಾಹ ರೂಪಂʼ ಮಲಯಾಳಂ ಮೂಲ ಹಾಡನ್ನು ಕಾಂತಾರ ಚಿತ್ರದಲ್ಲಿ ನಕಲು ಮಾಡಲಾಗಿದೆ ಎಂದು ತೈಕುಡಂ ಬ್ರಿಜ್‌ ಮ್ಯೂಸಿಕ್‌ ತಂಡ ಆರೋಪ ಮಾಡಿ ಕೋರ್ಟ್‌ ಮೆಟ್ಟಿಲೇರಿದ್ದು, ಕೋಯಿಕ್ಕೋಡ್ (ಕಲ್ಲಿಕೋಟೆ) ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಹಾಡಿನ ಬಳಕೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಿದ್ದು ಮಾತ್ರವಲ್ಲದೇ, ಹಾಡನ್ನು ಸಿನಿಮಾದಿಂದ ತೆಗೆಯುವಂತೆ ಸೂಚನೆ ನೀಡಿತ್ತು. ಇತ್ತ ಕೋಯಿಕ್ಕೋಡ್ (ಕಲ್ಲಿಕೋಟೆ) ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ನಡುವೆ ಕಾಂತಾರ ತಂಡ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಕೆಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ತಡೆಯಾಜ್ಞೆ ನೀಡಲು ಹೈಕೋರ್ಟ್‌ ನಿರಾಕರಿಸಿತ್ತು. ಆದರೆ ಈ ಮಧ್ಯೆ ಜಿಲ್ಲಾ ನ್ಯಾಯಾಲಯವು, ವರಾಹ ರೂಪಂ ಹಾಡಿನ ನಿರ್ಬಂಧ ಆದೇಶಕ್ಕೆ ತಡೆ ನೀಡಿ ವರಾಹ ರೂಪಂ ಹಾಡನ್ನು ಕಾಂತಾರ ಚಿತ್ರತಂಡ ಬಳಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಇದೀಗ ಕೇರಳ ಹೈಕೋರ್ಟ್‌ ತೈಕುಡಂ ಬ್ರಿಜ್‌ ಮ್ಯೂಸಿಕ್‌ ತಂಡದ ಪರವಾಗಿ ತೀರ್ಪು ನೀಡಿದ್ದು, ಕಾಂತಾರ ಮತ್ತು ಅದರ ಸಂಗೀತ ನಿರ್ದೇಶಕ ಬಿ ಅಜನೀಶ್‌ ಲೋಕನಾಥ್‌ ಅವರು ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪಕ್ಕೆ ಒಳಗಾಗಿದೆ. ಹಾಗಾಗಿ, ಕಾಂತಾರ ಚಿತ್ರ ತಂಡ ಮಂದೇನು ಕ್ರಮ ಕೈಗೊಳ್ಳಲಿದೆ ಎಂದು ಕಾದು ನೋಡಬೇಕಾಗಿದೆ.