HomeBreaking Entertainment News Kannadaಖಡಕ್ ಲುಕ್ ನಲ್ಲಿ ರಾಕಿಭಾಯ್ ವಾಕಿಂಗ್ | ಕೊನೆಗೂ ಸಿಕ್ಕಿತು ರಾಕಿಂಗ್ ಸ್ಟಾರ್ ಯಶ್ ದರ್ಶನ...

ಖಡಕ್ ಲುಕ್ ನಲ್ಲಿ ರಾಕಿಭಾಯ್ ವಾಕಿಂಗ್ | ಕೊನೆಗೂ ಸಿಕ್ಕಿತು ರಾಕಿಂಗ್ ಸ್ಟಾರ್ ಯಶ್ ದರ್ಶನ | ಅಭಿಮಾನಿಗಳು ಕೇಳಿದ ಪ್ರಶ್ನೆ ಏನು ಗೊತ್ತಾ?

Hindu neighbor gifts plot of land

Hindu neighbour gifts land to Muslim journalist

ಕೆಜಿಎಫ್ ಚಿತ್ರದ ಮೂಲಕ ಎಲ್ಲೆಡೆ ಅಬ್ಬರಿಸಿದ್ದ ರಾಕಿಂಗ್‌ ಸ್ಟಾರ್‌ ಯಶ್‌ ಸದ್ಯ ಮೌನವಾಗಿದ್ದಾರೆ. ಕೆಜಿಎಫ್‌ – 2 ಸಿನಿಮಾ ನಂತರ ಬಿಗ್ ಬ್ರೇಕ್ ತೆಗೆದುಕೊಂಡಿದ್ದಾರೆ. ಇದಂತು ರಾಕಿಭಾಯ್ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದೆ. ಅಲ್ಲದೆ, ಯಶ್ ಇತ್ತೀಚೆಗೆ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ. ಹುಟ್ಟುಹಬ್ಬಕ್ಕೂ ಯಶ್ ಅಭಿಮಾನಿಗಳ ಕೈಗೆ ಸಿಗಲಿಲ್ಲ. ಆದರೆ ಇದೀಗ ಅಪರೂಪಕ್ಕೆ ರಾಕಿಂಗ್ ಸ್ಟಾರ್ ಯಶ್ ದರ್ಶನವಾಗಿದೆ. ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಜೊತೆಗೆ ರಾಕಿಭಾಯ್ ಗೆ ಒಂದು ಪ್ರಶ್ನೆಯನ್ನೂ ಕೇಳಿದ್ದಾರೆ. ಯಾವ ಪ್ರಶ್ನೆ? ಅಭಿಮಾನಿಗಳು ಕೇಳಿರುವಂತಹ ಆ ಒಂದು ಪ್ರಶ್ನೆ ಏನಿರಬಹುದು ನೋಡೋಣ.

ನಟ ಯಶ್ ಏರ್‌ಪೋರ್ಟ್ ರಸ್ತೆಯ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್ ಫ್ಲಾಟ್‌ನಲ್ಲಿ ತನ್ನ ಪತ್ನಿ ರಾಧಿಕಾ ಹಾಗೂ ಮಕ್ಕಳ ಜೊತೆ ವಾಸಿಸುತ್ತಿದ್ದಾರೆ. ಅಪಾರ್ಟ್‌ಮೆಂಟ್ ಸುತ್ತ ವಾಕಿಂಗ್, ಜಾಗಿಂಗ್ ಮಾಡುತ್ತಾ ದೇಹ ಹುರಿಗೊಳಿಸುತ್ತಿದ್ದಾರೆ. ಸದ್ಯ ಯಶ್ ಅಪಾರ್ಟ್‌ಮೆಂಟ್ ಕಾಂಪೌಂಡ್‌ ಒಳಗೆ ವಾಕ್‌ ಮಾಡುತ್ತಿರುವ ವಿಡಿಯೋವೊಂದು ಸಖತ್ ವೈರಲ್ ಆಗಿದೆ. ಶಾರ್ಟ್ಸ್, ಟೀಶರ್ಟ್‌ ನಲ್ಲಿ ಯಶ್ ವಾಕಿಂಗ್ ಮಾಡೋ ಖಡಕ್ ಲುಕ್ ನೋಡಿದ ಅಭಿಮಾನಿಗಳು ಫುಲ್ ಥ್ರಿಲ್ಲಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಗಳ ಭರಪೂರವೇ ಹರಿದುಬರುತ್ತಿದೆ.

ಯಶ್ ಹೀಗೆ ಅಪಾರ್ಟ್‌ಮೆಂಟ್ ಒಳಗೆ ವರ್ಕೌಟ್ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು, ವಿಡಿಯೋ ನೋಡಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಹಲವು ಸಮಯಗಳ ಬಳಿಕ ಯಶ್ ದರ್ಶನವಾಗಿದ್ದು, ಅಭಿಮಾನಿಗಳು ರಾಕಿಂಗ್ ಸ್ಟಾರ್ ಗೆ ಪ್ರಶ್ನೆಯೊಂದನ್ನ ಕೇಳಿದ್ದಾರೆ. ಅದೇನೆಂದರೆ, ‘ಯಶ್‌19 ಅಪ್‌ಡೇಟ್ ಯಾವಾಗ’ ಎಂದು ಕೇಳಿದ್ದಾರೆ.

ಯಶ್ ಇತ್ತೀಚಿನ ದಿನಗಳಲ್ಲಿ ಹೆಚ್ಚು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದಿಲ್ಲ. ಹಾಗೇ ತಮ್ಮ ಹುಟ್ಟುಹಬ್ಬದ ಸಮಯದಲ್ಲೂ ಅಭಿಮಾನಿಗಳಿಗೆ ದರ್ಶನ ನೀಡಿಲ್ಲ. ಯಶ್ ತಾನು ಹುಟ್ಟುಹಬ್ಬದ ದಿನ ಮನೆಯಲ್ಲಿ ಇರುವುದಿಲ್ಲ, ಕ್ಷಮಿಸಿ ಎಂದು ಪತ್ರದಲ್ಲಿ ಕೇಳಿಕೊಂಡಿದ್ದರು. ಇದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು. ಯಶ್ ಈ ಬಾರಿ ಕುಟುಂಬ ಸದಸ್ಯರು ಹಾಗೂ ಸ್ನೇಹಿತರ ಜೊತೆ ದುಬೈನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಜೊತೆಗೆ ತಮ್ಮ ಹುಟ್ಟುಹಬ್ಬದ ದಿನವೇ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ.

ಹಾಗೇ ಅಭಿಮಾನಿಗಳ ಕಿವಿಗೆ ಇಂಪಾದ ಮಾತು ಹೇಳಿದ್ದಾರೆ. ಏನಂದ್ರೆ, “ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ. ನಿಮಗೋಸ್ಕರ ವಿಭಿನ್ನವಾಗಿರೋದನ್ನ ನಿಮ್ಮ ಮುಂದೆ ತರಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ. ಅಲ್ಲಿಯವರೆಗೂ ನಿಮ್ಮ ತಾಳ್ಮೆ ಇರಲಿ. ನಿಮ್ಮ ತಾಳ್ಮೆ ಮತ್ತು ಪ್ರೀತಿಯೇ ನನಗೆ ಈ ವರ್ಷದ ಹುಟ್ಟುಹಬ್ಬದ ನಿಮ್ಮ ಉಡುಗೊರೆ. ಕ್ಷಮಿಸಿ, ಈ ವರ್ಷದ ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರಲು ಸಾಧ್ಯವಾಗುತ್ತಿಲ್ಲ. ಆದರೆ, ಆದಷ್ಟು ಬೇಗ ನಿಮಗೆ ಸಿಗುತ್ತೇನೆ. ಮತ್ತು ನಿಮ್ಮ ಕಾಯುವಿಕೆಯನ್ನು ಅರ್ಥಪೂರ್ಣವಾಗಿಸುತ್ತೇನೆ” ಎಂದು ಯಶ್ ಅಭಿಮಾನಿಗಳಿಗೆ ಪತ್ರ ಬರೆದಿದ್ದರು.

ಸದ್ಯ ಯಶ್ ಮುಂದಿನ ಚಿತ್ರದ ಬಗ್ಗೆ ಕೆಲವೊಂದು ಸುದ್ದಿಗಳು ಹರಿದಾಡುತ್ತಿದ್ದು, ‘ಕೆವಿಎನ್​’ ಸಂಸ್ಥೆ ಮೂಲಕ ಯಶ್​ ಅವರ ಮುಂದಿನ ಸಿನಿಮಾ ನಿರ್ಮಾಣ ಆಗಲಿದೆ. ಬರೋಬ್ಬರಿ 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಚಿತ್ರ ಮೂಡಿಬರಲಿದೆ ಎಂದು ಹೇಳಲಾಗುತ್ತಿದೆ. ಹಾಗೇ ನರ್ತನ್ ಯಶ್‌ಗಾಗಿ 3 ವರ್ಷಗಳಿಂದ ಕಥೆ ಸಿದ್ಧಪಡಿಸುತ್ತಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಹೆಚ್ಚಿನ ಅಪ್ಡೇಟ್ ಇನ್ನೂ ಸಿಕ್ಕಿಲ್ಲ. ಅಭಿಮಾನಿಗಳಂತು ರಾಕಿಭಾಯ್ ಮುಂದಿನ ಸಿನಿಮಾದ ಬಗ್ಗೆ ಕಾತುರದಿಂದ ಕಾಯುತ್ತಿದ್ದಾರೆ.

RELATED ARTICLES

Most Popular

Recent Comments