HomeEntertainmentBigg Boss: ಲಾಯರ್ ಜಗದೀಶ್ ಮತ್ತೆ ಬಿಗ್ ಬಾಸ್ ಗೆ ಎಂಟ್ರಿ ಕೊಡ್ತಾರಾ...

Bigg Boss: ಲಾಯರ್ ಜಗದೀಶ್ ಮತ್ತೆ ಬಿಗ್ ಬಾಸ್ ಗೆ ಎಂಟ್ರಿ ಕೊಡ್ತಾರಾ ? ಕಿಚ್ಚ ಹೇಳಿದ್ದೇನು?

Hindu neighbor gifts plot of land

Hindu neighbour gifts land to Muslim journalist

Bigg Boss : ಬಿಗ್ ಬಾಸ್ ಮನೆಯಿಂದ ಲಾಯರ್ ಜಗದೀಶ್(Lawyer Jagadish) ಅನ್ನು ಹೊರ ಹಾಕಲಾಗಿದೆ. ಜಗದೀಶ್, ಮನೆಯೊಳಗೆ ಬಳಸಿದ ಭಾಷೆ, ನಡೆದುಕೊಂಡ ರೀತಿ, ತೋರಿದ ನಡವಳಿಕೆಗಳಿಂದಾಗಿ ಜಗದೀಶ್ ಅನ್ನು ಹೊರಗೆ ಹಾಕಲಾಗಿದೆ. ಜಗದೀಶ್ ಮೇಲೆ ಕೈ ಮಾಡಿದ್ದಕ್ಕೆ ರಂಜಿತ್ ಸಹ ಹೊರಗೆ ಹೋಗಿದ್ದಾರೆ. ಈ ವಿಚಾರವಾಗಿ ಎಲ್ಲರ ತಪ್ಪನ್ನು ತೋರಿಸಿ ಕಿಚ್ಚ ತನ್ನ ಪಂಚಾಯ್ತಿಯಲ್ಲಿ ಸಖತ್ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ಬೆನ್ನಲ್ಲೇ ಲಾಯರ್ ಜಗದೀಶ್ ಮತ್ತೆ ಮನೆಗೆ ಎಂಟ್ರಿಕೊಡುತ್ತಾರಾ? ಎಂಬ ಗುಮಾನಿ ಮೂಡಿದೆ. ವೈರಲ್ ಆದ ಪ್ರೋಮೋಗಳು ಇದಕ್ಕೆ ಇಂಬುನೀಡುತ್ತವೆ. ಆದರೆ ಈ ಬಗ್ಗೆ ಕಿಚ್ಚ(Kiccha Sudeep) ಹೊಸ ಸ್ಪಷ್ಟೀಕರಣ ನೀಡಿದ್ದಾರೆ.

ಹೌದು, ಲಾಯರ್ ಜಗದೀಶ್ ಅವರ ವರ್ತನೆಯಿಂದ ಬೇಸತ್ತು ಬಿಗ್​ಬಾಸ್​ನಿಂದ ಎಲಿಮಿನೇಟ್ ಮಾಡಲಾಗಿದೆ. ಆದರೆ ಶನಿವಾರ ಸುದೀಪ್ ಅವರು ಜಗದೀಶ್ ಪರವಾಗಿ ಮಾತನಾಡಿದ್ದರು. ಇದೀಗ ಬಿಗ್​ಬಾಸ್​ ಹೊಸ ಪ್ರೋಮೋ ಪ್ರಕಾರ, ಬಿಗ್​ಬಾಸ್ ವೇದಿಕೆ ಮೇಲೆ ಜಗದೀಶ್​ ಅವರ ವಿಡಿಯೋ ಪ್ರಸಾರ ಮಾಡಲಾಗಿದ್ದು, ಜಗದೀಶ್ ಬಿಗ್​ಬಾಸ್​ ಕ್ಷಮೆ ಕೇಳಿರುವುದಲ್ಲದೆ, ತಮ್ಮನ್ನು ಮತ್ತೆ ಬಿಗ್​ಬಾಸ್​ಗೆ ಕರೆಸಿಕೊಳ್ಳಲು ಸಾಧ್ಯವಾ ಎಂದು ಮನವಿ ಮಾಡಿದ್ದಾರೆ. ಆದರೆ ಕಿಚ್ಚನ ಹೇಳಿಕೆ ಬೇರೆಯೇ ಇದ್ದು ಜಗದೀಶ್ ಮತ್ತೆ ಮನೆಯೊಳಗೆ ಬರುವುದು ಡೌಟ್ ಎನ್ನಲಾಗಿದೆ.

ನಿನ್ನೆಯ ಪಂಚಾಯ್ತಿಯಲ್ಲಿ ಮಾತನಾಡಿದ್ದ ಕಿಚ್ಚ ನಾನು ಜಗದೀಶ್​ ಅವರನ್ನು ಕ್ಲೀನ್ ಮಾಡಲು ಅಥವಾ ಅವರು ಮಾಡಿದ್ದು ತಪ್ಪಲ್ಲ ಎಂದಲ್ಲ ಹೇಳಲು ಇಲ್ಲಿ ನಿಂತಿಲ್ಲ. ಅವರ ಮಾತಿನ ಮೇಲೆ ನಿಗಾ ಇರಲಿಲ್ಲ. ಈ ಕಾರಣದಿಂದ ಅವರು ಎಲಿಮಿನೇಟ್ ಆದರು. ಇದನ್ನು ಬಿಗ್ ಬಾಸ್ ಸಹಿಸಲ್ಲ. ಜಗದೀಶ್ ಬಿಗ್ ಬಾಸ್ ಪಾಲಿಗೆ ಮುಗಿದು ಹೋದ ಅಧ್ಯಾಯ’ ಎಂದು ಹೇಳಿದ್ದಾರೆ. ಇದರಿಂದ ಜಗದೀಶ್ ಅವರು ಮರಳಿ ಬರೋದಿಲ್ಲ ಎಂಬುದು ಸ್ಪಷ್ಟವಾಗಿದೆ.

RELATED ARTICLES

330 COMMENTS

Most Popular

Recent Comments