Home Entertainment Breaking News: ನಾದಬ್ರಹ್ಮ ಹಂಸಲೇಖ ಆಸ್ಪತ್ರೆಗೆ ದಾಖಲು

Breaking News: ನಾದಬ್ರಹ್ಮ ಹಂಸಲೇಖ ಆಸ್ಪತ್ರೆಗೆ ದಾಖಲು

Hindu neighbor gifts plot of land

Hindu neighbour gifts land to Muslim journalist

ಚಂದನವನದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದರ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಂಸಲೇಖ ಅವರನ್ನು ಬೆಂಗಳೂರಿನ ರಾಜಾಜಿನಗರ ಫಸ್ಟ್ ಬ್ಲಾಕ್​ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾದಬ್ರಹ್ಮ ಅವರ ಆರೋಗ್ಯದಲ್ಲಿ ಏರುಪೇರು ಆದ ವಿಷಯ ಕೇಳಿ ಅಭಿಮಾನಿಗಳಿಗೆ ಆತಂಕ ಆಗಿದ್ದು, ಆದರೆ ವೈದ್ಯರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ. ವೈದ್ಯರ ಹೇಳಿಕೆಯಿಂದ ಹಂಸಲೇಖ ಅಭಿಮಾನಿಗಳು ಖುಷಿಯಾಗಿದ್ದಾರೆ.

ಹಂಸಲೇಖ ಅವರಿಗೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಎದೆ ನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿಂದೆ ಹಂಸಲೇಖ ಅವರು ಓಪನ್​ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದರು. ಈಗ ಒಂದು ದಿನ ವಿಶ್ರಾಂತಿ ಪಡೆಯಲು ಹಂಸಲೇಖಗೆ ವೈದ್ಯರು ಸೂಚಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ಹಂಸಲೇಖ ಉಳಿದುಕೊಂಡಿದ್ದಾರೆ.