HomeEntertainmentಮಂಗಳೂರು : ಕುಕ್ಕರ್‌ ಬ್ಲಾಸ್ಟ್‌ ಪ್ರಕರಣ | ಕಾಂಗ್ರೆಸ್‌ ಕಚೇರಿ ಮೇಲೆ NIA ರೇಡ್‌:...

ಮಂಗಳೂರು : ಕುಕ್ಕರ್‌ ಬ್ಲಾಸ್ಟ್‌ ಪ್ರಕರಣ | ಕಾಂಗ್ರೆಸ್‌ ಕಚೇರಿ ಮೇಲೆ NIA ರೇಡ್‌: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿಚಾರಣೆ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು ಕುಕ್ಕರ್‌ ಬ್ಲಾಸ್ಟ್ ಕೇಸ್‌ಗೆ ಸಂಬಂಧಿಸಿದಂತೆ ಇದೀಗ ಹೊಸ ವಿಚಾರವೊಂದು ಹೊರಬಿದ್ದಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕಾಂಗ್ರೆಸ್‌ ಕಚೇರಿ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿದ್ದು ಇದರ ಜೊತೆಗೆ ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ ಅವರನ್ನು ವಿಚಾರಣೆ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಪ್ರಕರಣದ ಆರೋಪಿ ಶಾರೀಖ್‌ ಕುಟುಂಬದ ಆಸ್ತಿಯನ್ನು ಕಾಂಗ್ರೆಸ್‌ ಪಕ್ಷ, ಕಚೇರಿಯನ್ನಾಗಿ 10 ಲಕ್ಷ ರೂ. ಲೀಸ್‌ಗೆ ಪಡೆದುಕೊಂಡಿದೆ ಎನ್ನಲಾಗಿದ್ದು, ಈ ವರ್ಷ ಜೂನ್‌ ತಿಂಗಳಿಗೆ ಈ ಲೀಸ್‌ ಅಂತ್ಯವಾಗಲಿದೆ ಎಂದು ತಿಳಿದು ಬಂದಿದೆ. ಹೀಗಾಗಿ, ಕಾಂಗ್ರೆಸ್‌ ಕಚೇರಿ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಶಂಕಿತ ಉಗ್ರ ಶಾರೀಖ್ ಕುಟುಂಬದ ಆಸ್ತಿಗೆ ಸಂಬಂಧಿಸಿದಂತೆ NIA ಅಧಿಕಾರಿಗಳು ತಪಾಸಣೆ ಮಾಡಿದ್ದು, ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಸೊಪ್ಪು ಗುಡ್ಡೆಯಲ್ಲಿರುವ ಶಾರೀಖ್ ಕುಟುಂಬಕ್ಕೆ ಸೇರಿದ ಕಾಂಪ್ಲೆಕ್ಸ್‌ನಲ್ಲಿ ತಪಾಸಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. 8 ವರ್ಷಗಳ ಕಾಲ ಶಾರೀಖ್‌ ತಂದೆ ಈ ಕಾಂಪ್ಲೆಕ್ಸ್‌ನಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ಬಾಡಿಗೆಗೆ ನೀಡಿದ್ದಾರೆ ಎನ್ನಲಾಗಿದೆ.

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸಹೋದರನ ಪುತ್ರ ನವೀನ್ ಹೆಸರಿನಲ್ಲಿ 10 ಲಕ್ಷ ರೂ. ನೀಡಿ ಕಾಂಗ್ರೆಸ್ ಕಚೇರಿಗೆ ಬಾಡಿಗೆ ಪಡೆಯಲಾಗಿತ್ತು ಎಂದು ತಿಳಿದುಬಂದಿದೆ. ಈ ಪ್ರಕರಣದ ಕುರಿತಾಗಿ ಕಿಮ್ಮನೆ ರತ್ನಾಕರ್‌ ಅವರು ಪ್ರತಿಕ್ರಿಯೆ ನೀಡಿದ್ದು ಕಾಂಗ್ರೆಸ್‌ ಕಚೇರಿಗೆ ಎನ್‌ಐಎ ಅಧಿಕಾರಿಗಳು ಭೇಟಿ ನೀಡಿದ್ದನ್ನು ಒಪ್ಪಿಕೊಂಡಿದ್ದು ಜೊತೆಗೆ , ದಾಖಲೆಗಳನ್ನು ಪಡೆಯಲು ಇಡಿ ಅಧಿಕಾರಿಗಳು ಸಹ ಆಗಮಿಸಿದರ ಕುರಿತು ಕಿಮ್ಮನೆ ರತ್ನಾಕರ್‌ ಅವರು ಮಾಹಿತಿ ನೀಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಇದೆಲ್ಲದರ ನಡುವೆ ಶಾರೀಖ್‌ ಕುಟುಂಬಕ್ಕೂ ಕಾಂಗ್ರೆಸ್‌ಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.ಪ್ರತಿ ತಿಂಗಳು 10,000 ಬಾಡಿಗೆಯಂತೆ ಒಪ್ಪಂದವಾಗಿದ್ದು, ಈ ಒಪ್ಪಂದದ ಅನುಸಾರ ಪ್ರತಿ ತಿಂಗಳು ಶಾರೀಖ್‌ ಕುಟುಂಬದ ಬ್ಯಾಂಕ್ ಖಾತೆಗೆ 10,000 ಜಮಾ ಮಾಡಲಾಗುತ್ತಿತ್ತು ಎನ್ನಲಾಗಿದೆ.

2023ರ ಜೂನ್ ತಿಂಗಳಿನಲ್ಲಿ ಈ ಒಪ್ಪಂದ ಮುಕ್ತಾಯವಾಗಲಿದ್ದು 10 ಲಕ್ಷ ರೂ. ಅಡ್ವಾನ್ಸ್ ನೀಡಲು ಕೇಳಲಾಗಿತ್ತು. ಅಡ್ವಾನ್ಸ್ ಹಣವನ್ನು ವಾಪಸ್ ನೀಡಿದರೆ ಕಚೇರಿ ಖಾಲಿ ಮಾಡುವುದಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದು, ಈ ಸಂಬಂಧ ಎನ್ಐಎ ಅಧಿಕಾರಿಗಳು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿಚಾರಣೆ ನಡೆಸಿ ತೆರಳಿರುವ ಕುರಿತು ತೀರ್ಥಹಳ್ಳಿಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

RELATED ARTICLES

1 COMMENT

Most Popular

Recent Comments