Home Health Health Tips: ಬೆಳಿಗ್ಗೆ ಯಾವ ನೀರು ದೇಹಕ್ಕೆ ಉತ್ತಮ? ತಣ್ಣೀರು ಅಥವಾ ಬಿಸಿ? ಇಲ್ಲಿದೆ ಉತ್ತರ

Health Tips: ಬೆಳಿಗ್ಗೆ ಯಾವ ನೀರು ದೇಹಕ್ಕೆ ಉತ್ತಮ? ತಣ್ಣೀರು ಅಥವಾ ಬಿಸಿ? ಇಲ್ಲಿದೆ ಉತ್ತರ

Health Tips
Image Credit: The Print

Hindu neighbor gifts plot of land

Hindu neighbour gifts land to Muslim journalist

Health Tips: ಬೆಳಿಗ್ಗೆ ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಇಲ್ಲೊಂದು ಪ್ರಶ್ನೆ ಉದ್ಭವಿಸುತ್ತದೆ. ಬೆಳಗ್ಗೆ ಎದ್ದ ತಕ್ಷಣ ತಣ್ಣೀರು ಅಥವಾ ಬಿಸಿನೀರು ಕುಡಿಯುವುದೋ? ಎಂದು. ಹಾಗಾದರೆ ಇವೆರಡರಲ್ಲಿ ಯಾವುದ ಅತೀ ಉತ್ತಮ ಎಂದು ತಿಳಿಯುವುದು ಮುಖ್ಯ. ಬೆಳಿಗ್ಗೆ ಬಿಸಿ ನೀರು ಕುಡಿಯುವುದು ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದು. ನೀರು ನಮ್ಮ ದೇಹಕ್ಕೆ ಬಹಳ ಮುಖ್ಯ. ಇದು ದೇಹವನ್ನು ಹೈಡ್ರೇಟ್ ಆಗಿ ಇಡುತ್ತದೆ. ಅಲ್ಲದೆ ಅನೇಕ ರೋಗಗಳಿಂದ ರಕ್ಷಿಸುತ್ತದೆ. ಆದ್ದರಿಂದ, ಪ್ರತಿಯೊಬ್ಬರೂ ಪ್ರತಿದಿನ 2-3 ಲೀಟರ್ ನೀರನ್ನು ನಿಯಮಿತವಾಗಿ ಕುಡಿಯಬೇಕು.

ಆಯುರ್ವೇದದಲ್ಲಿ ನೀರು ಕುಡಿಯುವುದರ ಮೂಲಕ ದಿನವನ್ನು ಪ್ರಾರಂಭಿಸುವುದರಿಂದ ಅನೇಕ ರೀತಿಯ ರೋಗಗಳು ದೂರವಾಗುತ್ತವೆ ಎಂದು ನಂಬಲಾಗಿದೆ. ಹೀಗಾಗಿಯೇ ಹೆಚ್ಚಿನವರು ಬೆಳಗ್ಗೆ ಎದ್ದ ನಂತರ ನೀರು ಕುಡಿಯಲು ಇಷ್ಟಪಡುತ್ತಾರೆ. ಇವರಲ್ಲಿ ಕೆಲವರು ಬಿಸಿ ನೀರು ಕುಡಿದರೆ ಕೆಲವರು ತಣ್ಣೀರು ಕುಡಿಯುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ಎರಡರಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ ಮತ್ತು ಪರಿಣಾಮಕಾರಿ? ಇಲ್ಲಿದೆ ವಿವರ.

ಬಿಸಿನೀರು ಜೀರ್ಣಾಂಗ ವ್ಯವಸ್ಥೆಯನ್ನು ಸಕ್ರಿಯಗೊಳಿಸುತ್ತದೆ ಮತ್ತು ಕರುಳಿನಲ್ಲಿರುವ ಕೊಳೆಯನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದರಿಂದ ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಬಿಸಿ ನೀರು ಕುಡಿಯುವುದರಿಂದ ಮೆಟಾಬಾಲಿಸಂ ಕೂಡ ಹೆಚ್ಚುತ್ತದೆ. ಬಿಸಿನೀರು ಕುಡಿಯುವುದರಿಂದ ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ವೇಗವಾಗಿ ಕರಗಿಸುತ್ತದೆ. ಮುಂಜಾನೆ ಬೆಚ್ಚಗಿನ ನೀರನ್ನು ಕುಡಿಯುವುದರಿಂದ ತೂಕವನ್ನು ತ್ವರಿತವಾಗಿ ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

ಆರೋಗ್ಯ ತಜ್ಞರ ಪ್ರಕಾರ, ಬೆಳಿಗ್ಗೆ ಬಿಸಿನೀರನ್ನು ಮಾತ್ರ ಕುಡಿಯಬೇಕು. ಏಕೆಂದರೆ ತಣ್ಣೀರು ಜೀರ್ಣಾಂಗ ವ್ಯವಸ್ಥೆಯನ್ನು ಸಂಕುಚಿತಗೊಳಿಸುತ್ತದೆ ಮತ್ತು ಅನೇಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಇದು ಅಜೀರ್ಣ, ಗ್ಯಾಸ್ ಮತ್ತು ಅಸಿಡಿಟಿಯಂತಹ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ತಣ್ಣೀರು ಕುಡಿಯುವುದರಿಂದ ರಕ್ತನಾಳಗಳ ಸಂಕೋಚನಕ್ಕೆ ಕಾರಣವಾಗಬಹುದು, ಇದರಿಂದಾಗಿ ರಕ್ತ ಪರಿಚಲನೆ ನಿಧಾನವಾಗುತ್ತದೆ ಮತ್ತು ದೇಹವು ಸರಿಯಾದ ಸಮಯದಲ್ಲಿ ಪೋಷಕಾಂಶಗಳನ್ನು ಪಡೆಯುವುದಿಲ್ಲ. ಇದಲ್ಲದೆ, ತಣ್ಣೀರು ಕುಡಿಯುವುದರಿಂದ ದೇಹದ ಉಷ್ಣತೆಯು ಕಡಿಮೆಯಾಗುತ್ತದೆ, ಇದರಿಂದಾಗಿ ದೇಹವು ತನ್ನ ಸಾಮಾನ್ಯ ತಾಪಮಾನಕ್ಕೆ ಮರಳಲು ಹೆಚ್ಚಿನ ಶಕ್ತಿಯನ್ನು ವ್ಯಯಿಸುತ್ತದೆ ಮತ್ತು ದಣಿದ ಅನುಭವವಾಗುತ್ತದೆ.

ನೀವು ಬೆಳಿಗ್ಗೆ ಎದ್ದ ತಕ್ಷಣ ಒಂದು ಲೋಟ ಬಿಸಿನೀರನ್ನು ಕುಡಿದರೆ, ಎಲ್ಲಾ ಮೂರು ದೋಷಗಳು – ವಾತ, ಪಿತ್ತ ಮತ್ತು ಕಫ – ದೇಹದಲ್ಲಿ ಸಮತೋಲನದಲ್ಲಿರುತ್ತವೆ ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಇದರಿಂದ 56 ಬಗೆಯ ರೋಗಗಳನ್ನು ದೂರವಿಡಬಹುದು. ಹೀಗೆ ಮಾಡುವುದರಿಂದ ಜೀರ್ಣಕ್ರಿಯೆ ಸಮಸ್ಯೆಗಳು ಬರುವುದಿಲ್ಲ, ಬೊಜ್ಜು, ಹೃದ್ರೋಗ, ಮಧುಮೇಹ, ಶೀತ ಮತ್ತು ಚರ್ಮ ಸಂಬಂಧಿ ಸಮಸ್ಯೆಗಳು ದೂರವಾಗುತ್ತವೆ.