Home » Kerala: ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಕಿರಾತಕ !ಮೂವರ ಬಲಿ!!!

Kerala: ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಕಿರಾತಕ !ಮೂವರ ಬಲಿ!!!

0 comments
Kerala train fire

Kerala train fire : ಚಲಿಸುತ್ತಿದ್ದ ರೈಲಿನಲ್ಲೇ ಅನಾಮಿಕ ವ್ಯಕ್ತಿ ಒಬ್ಬ ಸಹ ಪ್ರಯಾನಿಕರಿಗೆ ಬೆಂಕಿ ಹಚ್ಚಿದ ಘಟನೆ (Kerala train fire) ಅಲಪ್ಪುಳ- ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ಪ್ರೆಸ್ ರೈಲಿನಲ್ಲಿ ಸಂಭವಿಸಿದೆ.

ಅಲಪ್ಪುಳ- ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲು ಕೋಝಿಕ್ಕೋಡ್ ನಗರವನ್ನು ದಾಟಿ ಕೇರಳದ ಕೊರಾಪುಳ ರೈಲ್ವೆ ಸೇತುವೆಯನ್ನು ತಲುಪಿತು. ಈ ವೇಳೆ ಅನಾಮಿಕನೊಬ್ಬ ಸಹ ಪ್ರಯಾಣಿಕನೊಂದಿಗೆ ಸೀಟಿಗಾಗಿ ಜಗಳವಾಡಿ, ನಂತರ ಆತನಿಗೆ ಬೆಂಕಿ ಹಚ್ಚಿದ ಪರಿಣಾಮ 9 ಮಂದಿ ಗಾಯಗೊಂಡಿದ್ದಾರೆ. ಘಟನೆ ನಡೆದ ಕೂಡಲೇ ವ್ಯಕ್ತಿ ಪರಾರಿಯಾಗಿದ್ದು, ರೈಲ್ವೆ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೈಲು ಕಣ್ಣೂರು ತಲುಪಿದಾಗ, ಘಟನೆಯ ನಂತರ ಮಹಿಳೆ ಮತ್ತು ಮಗು ಕಾಣೆಯಾಗಿದ್ದಾರೆ ಎಂದು ಕೆಲವು ಪ್ರಯಾಣಿಕರು ದೂರಿದರು. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ಮಹಿಳೆ ಹಾಗೂ ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮಹಿಳೆ, ಮಗು ಹಾಗೂ ಓರ್ವ ವ್ಯಕ್ತಿಯ ಮೃತದೇಹಗಳು ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಬೆಂಕಿಯನ್ನು ನೋಡಿದ ನಂತರ ಆ ಮೂವರು ರಾಬರಿಗೊಂಡು ತಪ್ಪಿಸಿಕೊಳ್ಳಲು ರೈಲಿನಿಂದ ಇಳಿಯಲು ಪ್ರಯತ್ನಿಸಿ ಬಿದ್ದಿದ್ದಾರೆ ಎಂದು ರೈಲ್ವೆ ಪೊಲೀಸರು ಶಂಕಿಸಿದ್ದಾರೆ.

ಘಟನೆ ಸಂಬಂಧಿಸಿದ ಕೊಂಕಣ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಆರೋಪಿ ತಲೆಮರಿಸಿಕೊಂಡಿದ್ದು ಪೊಲೀಸರು ಬಲೆ ಬೀಸಿದ್ದಾರೆ,

banner

You may also like

Leave a Comment