Home latest ವನ್ಯಜೀವಿಗಳ ಮೃತದೇಹ ಇನ್ನು ಮುಂದೆ ಸುಡುವಂತಿಲ್ಲ, ಹೂಳುವಂತಿಲ್ಲ- ಅರಣ್ಯ ಇಲಾಖೆಯಿಂದ ಸುತ್ತೋಲೆ!

ವನ್ಯಜೀವಿಗಳ ಮೃತದೇಹ ಇನ್ನು ಮುಂದೆ ಸುಡುವಂತಿಲ್ಲ, ಹೂಳುವಂತಿಲ್ಲ- ಅರಣ್ಯ ಇಲಾಖೆಯಿಂದ ಸುತ್ತೋಲೆ!

Hindu neighbor gifts plot of land

Hindu neighbour gifts land to Muslim journalist

ವನ್ಯಜೀವಿಗಳ
ಮೃತದೇಹಗಳನ್ನು ಇನ್ನು ಮುಂದೆ ಸುಡುವಂತಿಲ್ಲ. ಹಾಗೆಯೇ ಹೂಳುವಂತೆಯೂ ಇಲ್ಲ. ವನ್ಯಜೀವಿಗಳ ಮೃತದೇಹಗಳನ್ನು ಕೊಳೆಯಲು ಬಿಡಬೇಕು. ಇದು ಪ್ರಾಣಿ-ಪಕ್ಷಿಗಳಿಗೆ ಆಹಾರವಾಗಿಸಬೇಕು. ಏಕೆಂದರೆ, ವನ್ಯಪ್ರಾಣಿಗಳ ಮೃತದೇಹಗಳು ಕೊಳೆತ ಅನಂತರ ಪೋಷಕಾಂಶಗಳಿಂದ ಸಮೃದ್ಧವಾಗುತ್ತವೆ ಎಂದು ಅರಣ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ವನ್ಯಜೀವಿ ತಜ್ಞ ಡಾ| ಸಂಜಯ್ ಗುಬ್ಬಿ ಅವರ ಮನವಿಯಂತೆ ಅರಣ್ಯ ಇಲಾಖೆ ಈ ನಿರ್ಧಾರಕ್ಕೆ ಬಂದಿದೆ.

ವನ್ಯಜೀವಿಗಳು ತಮ್ಮ ಸಾವಿನ ಅನಂತರವೂ ಪರಿಸರ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಇನ್ನು ಮುಂದೆ ಎಲ್ಲಾ ವನ್ಯಜೀವಿಗಳ ಮೃತದೇಹಗಳನ್ನು ನೈಸರ್ಗಿಕ ಆವಾಸಸ್ಥಾನಗಳಲ್ಲಿ ಸುಡುವ ಅಥವಾ ಹೂಳುವ ಪದ್ಧತಿಯನ್ನು ತತ್‌ಕ್ಷಣದಿಂದ ನಿಲ್ಲಿಸಿ, ಅರಣ್ಯದೊಳಗೆ ಕೊಳೆಯಲು ಬಿಟ್ಟು, ಮೃತದೇಹ ಅವಲಂಬಿಸಿ ಬದುಕುವ ಪ್ರಾಣಿ-ಪಕ್ಷಿಗಳ ಆಹಾರಕ್ಕೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅರಣ್ಯ ಇಲಾಖೆ ಸೂಚಿಸಿದೆ.

ಈ ಮಾರ್ಗಸೂಚಿಗಳು ರಾಷ್ಟ್ರೀಯ ಪ್ರಾಣಿ ಹುಲಿಗೆ ಅನ್ವಯಿಸುವುದಿಲ್ಲ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಸಸ್ಯಹಾರಿ ಮತ್ತು ಮಾಂಸಹಾರಿ ವನ್ಯಪ್ರಾಣಿಗಳು ಸ್ವಾಭಾವಿಕ ಅಥವಾ ಅಸ್ವಾಭಾವಿಕವಾಗಿ ಮೃತಪಟ್ಟರೆ ಅವುಗಳ ಮೃತದೇಹವನ್ನು ಸುಡಲಾಗುತ್ತದೆ. ಆದರೆ, ವನ್ಯಪ್ರಾಣಿಗಳ ಕೊಳೆತ ಅನಂತರ ಪೋಷಕಾಂಶಗಳಿಂದ ಸಮೃದ್ಧವಾಗಿ ಹಲವಾರು ಜಾತಿಯ ಪ್ರಾಣಿ, ಪಕ್ಷಿಗಳಿಗೆ ಆಹಾರವನ್ನು ಒದಗಿಸಿ ಪರಿಸರ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಅದಲ್ಲದೇ, ಪ್ರಮುಖವಾಗಿ ರಣಹದ್ದುಗಳು ವನ್ಯಜೀವಿ ಮೃತದೇಹದ ಶರೀರದ ಆಹಾರವನ್ನು ಸೇವಿಸಿ ಅದರ ನೈಸರ್ಗಿಕ ಸಂಖ್ಯೆ ಹೆಚ್ಚಿಸಿಕೊಳ್ಳುತ್ತದೆ.