Home latest Andhra Pradesh: ಹಿಂದೂ ಧರ್ಮದ ರಕ್ಷಣೆಗಾಗಿ ಬರೋಬ್ಬರಿ 3000 ದೇವಾಲಯಗಳ ನಿರ್ಮಾಣ! ಆಂಧ್ರ ಗೌರ್ಮೆಂಟಿನ ಮಹತ್ವದ...

Andhra Pradesh: ಹಿಂದೂ ಧರ್ಮದ ರಕ್ಷಣೆಗಾಗಿ ಬರೋಬ್ಬರಿ 3000 ದೇವಾಲಯಗಳ ನಿರ್ಮಾಣ! ಆಂಧ್ರ ಗೌರ್ಮೆಂಟಿನ ಮಹತ್ವದ ನಿರ್ಧಾರ!

Hindu neighbor gifts plot of land

Hindu neighbour gifts land to Muslim journalist

Andhra Pradesh : ಆಂಧ್ರಪ್ರದೇಶದ(Andhra Pradesh) ಸರ್ಕಾರವು ಹಿಂದೂ ಧರ್ಮದ ರಕ್ಷಣೆಗೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಆಂಧ್ರದ ಪ್ರತಿ ಜಿಲ್ಲೆಗಳಲ್ಲಿ ಬರೋಬ್ಬರಿ 3000 ದೇವಾಲಯಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ವೈಎಸ್‌ ಜಗನ್‌ ಮೋಹನ್‌ ರೆಡ್ಡಿ(Y S Jaganmohan Reddy) ನೇತೃತ್ವದ ಸರ್ಕಾರ ಅಣಿಯಾಗಿದೆ. ಅಲ್ಲದೆ ಈ ದೊಡ್ಡ ಯೋಜನೆಗೆ ಭಾರೀ ಮೊತ್ತದ ಹಣವನ್ನು ವ್ಯಯಿಸಲು ಜಗನ್‌ ಮುಂದಾಗಿದ್ದಾರೆ.

ರಾಜ್ಯದಲ್ಲಿ ದೇಗುಲಗಳ ನಿರ್ಮಾಣವನ್ನು ದೊಡ್ಡ ಮಟ್ಟದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಪ್ರತಿ ಜಿಲ್ಲೆಯಲ್ಲೂ ಸರ್ಕಾರದಿಂದ ದೇವಸ್ಥಾನವನ್ನು ನಿರ್ಮಿಸಲಾಗುತ್ತದೆ. ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ನಿರ್ದೇಶನದ ಮೇರೆಗೆ, ಹಿಂದೂ ಧರ್ಮವನ್ನು ರಕ್ಷಿಸಲು ಮತ್ತು ಪ್ರಚಾರ ಮಾಡಲು ಈ ಉಪಕ್ರಮವನ್ನು ಘೋಷಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಧಾರ್ಮಿಕ ದತ್ತಿ ಸಚಿವರೂ ಆದ ಕೊಟ್ಟು ಸತ್ಯನಾರಾಯಣ(Kottu Satyanarayan) ಹೇಳಿದ್ದಾರೆ.

‘ಬೃಹತ್ ಪ್ರಮಾಣದಲ್ಲಿ ಹಿಂದೂ ನಂಬಿಕೆಯನ್ನು ರಕ್ಷಿಸಲು ಮತ್ತು ಪ್ರಚಾರ ಮಾಡಲು, ದುರ್ಬಲ ವರ್ಗಗಳ ಪ್ರದೇಶಗಳಲ್ಲಿ ಹಿಂದೂ ದೇವಾಲಯಗಳ ನಿರ್ಮಾಣವನ್ನು ಪ್ರಾರಂಭಿಸಲಾಗಿದೆ. ತಿರುಮಲ ತಿರುಪತಿ(Tirupati) ದೇವಸ್ಥಾನದ ಶ್ರೀ ವಾಣಿ ಟ್ರಸ್ಟ್ ದೇವಾಲಯಗಳ ನಿರ್ಮಾಣಕ್ಕೆ ತಲಾ ₹ 10 ಲಕ್ಷ ವಿನಿಯೋಗಿಸಿದೆ. 1,330 ದೇವಾಲಯಗಳ ನಿರ್ಮಾಣ ಪ್ರಾರಂಭದ ಜೊತೆಗೆ, ಇನ್ನೂ 1,465 ಅನ್ನು ಈ ಪಟ್ಟಿಗೆ ಸೇರಿಸಲಾಗಿದೆ. ಅದೇ ರೀತಿ ಕೆಲವು ಶಾಸಕರ ಮನವಿ ಮೇರೆಗೆ ಇನ್ನೂ 200 ದೇವಸ್ಥಾನಗಳನ್ನು ನಿರ್ಮಿಸಲಾಗುವುದು. ಉಳಿದ ದೇವಸ್ಥಾನಗಳ ನಿರ್ಮಾಣವನ್ನು ಇತರೆ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಮಾಡಲಾಗುವುದು.

ದತ್ತಿ ಇಲಾಖೆಯ ಅಧೀನದಲ್ಲಿ 978 ದೇವಸ್ಥಾನಗಳ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಪ್ರತಿ 25 ದೇವಸ್ಥಾನಗಳ ಕಾಮಗಾರಿಯನ್ನು ಒಬ್ಬ ಸಹಾಯಕ ಎಂಜಿನಿಯರ್ಗೆ ವಹಿಸಲಾಗಿದೆ ಎಂದು ಸಚಿವರು ತಿಳಿಸಿದರು. ಕೆಲವು ದೇವಾಲಯಗಳ ಪುನರುಜ್ಜೀವನಕ್ಕಾಗಿ ಮತ್ತು ದೇವಾಲಯಗಳಲ್ಲಿ ಧಾರ್ಮಿಕ ಕ್ರಿಯೆಗಳನ್ನು ನಡೆಸಲು ₹ 270 ಕೋಟಿ ಸಿಜಿಎಫ್ ನಿಧಿಯಲ್ಲಿ ₹ 238 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ.

ಅದೇ ರೀತಿ, ಪ್ರತಿ ದೇವಸ್ಥಾನಕ್ಕೆ ₹ 5,000 ದರದಲ್ಲಿ ಧಾರ್ಮಿಕ ಕ್ರಿಯೆಗಳಿಗೆ (ದೂಪ ದೀಪ ನೈವೇದ್ಯಂ) ಹಣಕಾಸು ವರ್ಷದಲ್ಲಿ ₹ 28 ಕೋಟಿ ಮೀಸಲಿಟ್ಟಿದ್ದು, ಈ ಪೈಕಿ ₹ 15 ಕೋಟಿ ಖಾಲಿಯಾಗಿದೆ. ‘ಧೂಪ ದೀಪ’ ಯೋಜನೆಯಡಿ, 2019 ರ ವೇಳೆಗೆ ಕೇವಲ 1,561 ದೇವಾಲಯಗಳನ್ನು ನೋಂದಾಯಿಸಲಾಗಿದೆ. ಅದು ಈಗ 5,000 ಕ್ಕೆ ವಿಸ್ತರಿಸಿದೆ ಎಂದು ಸತ್ಯನಾರಾಯಣ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.