Home latest ಬಂಟ್ವಾಳ: ದ್ವಿಚಕ್ರ ವಾಹನ ಹರಿದು ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

ಬಂಟ್ವಾಳ: ದ್ವಿಚಕ್ರ ವಾಹನ ಹರಿದು ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

Hindu neighbor gifts plot of land

Hindu neighbour gifts land to Muslim journalist

ಬಂಟ್ವಾಳ: ರಸ್ತೆಯ ಮಧ್ಯೆ ಮಲಗಿದ್ದ ವ್ಯಕ್ತಿಯೋರ್ವನ ಮೇಲೆ ದ್ವಿಚಕ್ರ ವಾಹನ ಹರಿದು ಅವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪದ ಕೋಯನಜಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ ನಡೆದಿದೆ.

ಸಜೀಪ ಮುನ್ನೂರು ನಿವಾಸಿ ಕೃಷ್ಣ ಮೂರ್ತಿ ಹೇರಳ (50)ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಬಂಟ್ವಾಳದ ಮೆಲ್ಕಾರ್ ಸಮೀಪದ ಪೆಟ್ರೋಲ್ ಪಂಪ್ ಸಮೀಪ ವ್ಯಕ್ತಿಯೋರ್ವ ನಡೆದುಕೊಂಡು ಬಂದು ಬಳಿಕ ರಸ್ತೆಯಲ್ಲಿ ಮಲಗಿದ್ದಾರೆ.

ಕೆಲವೇ ಹೊತ್ತಿನಲ್ಲಿ ದ್ವಿಚಕ್ರ ವಾಹನವೊಂದು ಮಲಗಿದ್ದ ವ್ಯಕ್ತಿಯ ಮೇಲೆ ಹರಿದಿದೆ. ಬೈಕ್ ಸವಾರ ಕೂಡ ರಸ್ತೆಗೆ ಎಸೆಯಲ್ಪಟ್ಟಿದ್ದಾನೆ.

ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕೃಷ್ಣ ಮೂರ್ತಿ ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳು ಸ್ಕೂಟರ್ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ.

ಮೆಲ್ಕಾರ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆಯ ದೃಶ್ಯಾವಳಿಗಳು ಸಿ‌ಸಿ ಕೆಮರಾದಲ್ಲಿ ಸೆರೆಯಾಗಿದ್ದು, ಇದೀಗ ಎಲ್ಲೆಡೆ ವೈರಲ್ ಆಗಿದೆ.