Homelatestಅಣ್ಣನ ಮೃತದೇಹ ಕಂಡು ಹಾರಿಹೋಯಿತು ತಂಗಿಯ ಪ್ರಾಣಪಕ್ಷಿ : ಮೈಸೂರಲ್ಲೊಂದು ಮನಕಲಕುವ ಘಟನೆ

ಅಣ್ಣನ ಮೃತದೇಹ ಕಂಡು ಹಾರಿಹೋಯಿತು ತಂಗಿಯ ಪ್ರಾಣಪಕ್ಷಿ : ಮೈಸೂರಲ್ಲೊಂದು ಮನಕಲಕುವ ಘಟನೆ

Hindu neighbor gifts plot of land

Hindu neighbour gifts land to Muslim journalist

ಮೈಸೂರು : ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಅಣ್ಣನ ಮೃತದೇಹ ನೋಡಿ ತಂಗಿ ಆಘಾತಗೊಂಡು ಮೃತಪಟ್ಟಿದ್ದಾಳೆ. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಈ ಮನಕಲಕುವ ಘಟನೆ ನಡೆದಿದೆ.

ಅಂತ್ಯಸಂಸ್ಕಾರಕ್ಕೆ ಬಂದಿದ್ದ ದೊಡ್ಡಪ್ಪನ ಮಗಳು ರಶ್ಮಿ( 21), ಅಣ್ಣ ಕೀರ್ತಿ ( 28) ಮೃತದೇಹ ನೋಡಿ ಸಾವನ್ನಪ್ಪಿದ್ದಾಳೆ.

ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಕೀರ್ತಿ ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದ. ಈ ದುರ್ಘಟನೆ ಹುಣಸೂರು ತಾಲೂಕಿನ ಸೋಮನಹಳ್ಳಿ ಗೇಟ್ ಬಳಿ ನಡೆದಿತ್ತು. ಹಾಗೂ ಈ ಘಟನೆ ಮೂವರಿಗೆ ಗಂಭೀರ ಗಾಯಗಳಾಗಿದ್ದವು.

ಇಂದು ಅಣ್ಣನ ಅಂತ್ಯಸಂಸ್ಕಾರಕ್ಕೆ ಬಂದ ತಂಗಿ ಅಣ್ಣನ ಮೃತದೇಹ ನೋಡಿ ಕುಸಿದು ಬಿದ್ದಿದ್ದಾಳೆ, ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ರಶ್ಮಿ ಪ್ರಾಣಬಿಟ್ಟಿದ್ದಾಳೆ.

ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Most Popular

Recent Comments