Home latest ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ; ಮುಂದಿನ ನಾಯಕ ಯಾರು...

ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ; ಮುಂದಿನ ನಾಯಕ ಯಾರು ?

Hindu neighbor gifts plot of land

Hindu neighbour gifts land to Muslim journalist

ಇನ್ನೇರಡು ದಿನಗಳಲ್ಲಿ ಐಪಿಎಲ್ (IPL 2022) 15ನೇ ಆವೃತ್ತಿ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಹಾಗೂ ಕೋಲ್ಕತ್ತಾ ಸೆಣೆಸಲಿವೆ. ಆದರೆ ಆರಂಭಕ್ಕೂ ಮುನ್ನ ಸಿಎಸ್​ಕೆ ತಂಡದಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ನೀಡಿದ್ದಾರೆ!

ಹಲವು ಬಾರಿ ಎಂಎಸ್ ಧೋನಿ ಈ ಸೀಸನ್​ನಲ್ಲಿ ಆಡಿದ ನಂತರ ಮುಂದಿನ ಸೀಸನ್​ನಲ್ಲಿ ನಾಯಕತ್ವ ತೊರೆಯುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ಧೋನಿ ಸಿಎಸ್‌ಕೆ ನಾಯಕತ್ವಕ್ಕೆ ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿದ್ದಾರೆ
ಈ ವಿಚಾರವನ್ನು ಸ್ವತಃ ಸಿಎಸ್​ಕೆ ಆಡಳಿತ ಮಂಡಳಿ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹೇಳಿಕೊಂಡಿದೆ. 

ಮಹೇಂದ್ರ ಸಿಂಗ್ ಧೋನಿ ಕಳೆದ 12 ಸೀಸನ್‌ಗಳಲ್ಲಿ ಚೆನ್ನೈ ತಂಡದ ನಾಯಕರಾಗಿದ್ದರು. 2008 ರಲ್ಲಿ ಲೀಗ್ ಪ್ರಾರಂಭವಾದಾಗಿನಿಂದ ಅವರು ಚೆನ್ನೈ ಸೂಪರ್ ಕಿಂಗ್ಸ್‌ ನಾಯಕತ್ವದ ಜವಬ್ದಾರಿ ಹೊತ್ತಿದ್ದರು. ಧೋನಿ ಐಪಿಎಲ್‌ನಲ್ಲಿ ಯಶಸ್ವಿ ನಾಯಕರಾಗಿದ್ದು, ಅವರ ನಾಯಕತ್ವದಲ್ಲಿ ಸಿಎಸ್​ಕೆ ತಂಡ ಇದುವರೆಗೆ ನಾಲ್ಕು ಬಾರಿ ಪ್ರಶಸ್ತಿ ಗೆದ್ದಿದೆ.

ಧೋನಿ ಸಿಎಸ್‌ಕೆ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದು, ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಆದರೆ ಧೋನಿ ಈ ಆವೃತ್ತಿಯಲ್ಲಿ ಮತ್ತು ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತಾರೆ ಎಂದು ಸಿಎಸ್‌ಕೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈ ತಂಡದ ಮುಂದಿನ ನಾಯಕ ಯಾರು ಎಂದರೆ , ರವೀಂದ್ರ ಜಡೇಜಾ ಸಿಎಸ್​ಕೆ ತಂಡದ ನಾಯಕತ್ವವಹಿಸಿಕೊಂಡಿದ್ದಾರೆ.  2012 ರಿಂದ ಚೆನ್ನೈ ಸೂಪರ್ ಕಿಂಗ್ಸ್‌ನ ಅವಿಭಾಜ್ಯ ಅಂಗವಾಗಿರುವ ಜಡೇಜಾ, ಸಿಎಸ್ ಕೆ ತಂಡದ ನಾಯಕರಾಗಿದ್ದಾರೆ. ಧೋನಿ ಚೆನ್ನೈ ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾಗೆ ಹಸ್ತಾಂತರಿಸಿದ್ದಾರೆ.