Home latest ಕಾರಿನ ಸ್ಟೆಪ್ನಿ ಬದಲಾಯಿಸುತ್ತಿದ್ದ ವೇಳೆ ಲಾರಿ ಹರಿದು ಇಬ್ಬರು ಶಬರಿಮಲೆ ಸ್ವಾಮಿ ಭಕ್ತರ ದುರ್ಮರಣ

ಕಾರಿನ ಸ್ಟೆಪ್ನಿ ಬದಲಾಯಿಸುತ್ತಿದ್ದ ವೇಳೆ ಲಾರಿ ಹರಿದು ಇಬ್ಬರು ಶಬರಿಮಲೆ ಸ್ವಾಮಿ ಭಕ್ತರ ದುರ್ಮರಣ

Hindu neighbor gifts plot of land

Hindu neighbour gifts land to Muslim journalist

ಚಿಕ್ಕಬಳ್ಳಾಪುರ : ಶಬರಿಮಲೆ ಅಯ್ಯಪ್ಪ ದರ್ಶನ ಪಡೆದು ವಾಪಸ್ ಬರುತ್ತಿದ್ದ ವೇಳೆ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ರೆಡ್ಡಿಗೊಲ್ಲವಾರಹಳ್ಳಿ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಈ ಅಪಘಾತ ಸಂಭವಿಸಿದೆ.

ಪಂಚರ್ ಆಗಿದ್ದ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಸ್ಟೆಪ್ನಿ ಬದಲಾಯಿಸುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ, ಕಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಧರಣೀಶ್ ( 22) ಹಾಗೂ ನಿರಂಜನ್ ಸಿಂಗ್ ( 52) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಆಂಧ್ರಮೂಲದವರು. ಲಾರಿ ಚಾಲಕ ಸ್ಥಳದಲ್ಲೇ ಪರಾರಿಯಾಗಿದ್ದಾನೆ‌. ಪೇರಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.