Home latest CM Siddaramiah: ‘ಚಿಟ್‌ ಫಂಡ್‌’ ಹೊಸ ಸಾಫ್ಟವೇರ್‌, ಮೊಬೈಲ್‌ ಆಯಪ್‌ ಬಿಡುಗಡೆ – ಗೃಹಲಕ್ಷ್ಮಿ ದುಡ್ಡನ್ನು...

CM Siddaramiah: ‘ಚಿಟ್‌ ಫಂಡ್‌’ ಹೊಸ ಸಾಫ್ಟವೇರ್‌, ಮೊಬೈಲ್‌ ಆಯಪ್‌ ಬಿಡುಗಡೆ – ಗೃಹಲಕ್ಷ್ಮಿ ದುಡ್ಡನ್ನು ಹೂಡಿಕೆ ಮಾಡಲು ಮಹಿಳೆಯರಿಗೆ ಸಿಎಂ ಸಲಹೆ

Hindu neighbor gifts plot of land

Hindu neighbour gifts land to Muslim journalist

 

CM Siddaramiah : ಕರ್ನಾಟಕ ಸರ್ಕಾರಿ ಸ್ವಾಮ್ಯದ ‘ಮೈಸೂರು ಸೇಲ್ಸ್‌ ಇಂಟರನ್ಯಾಷನಲ್‌ ಲಿಮಿಟೆಡ್‌’ (MSIL)‌ ಸಂಸ್ಥೆಯು ಸುಗಮ ಮತ್ತು ಪಾರದರ್ಶಕ ಚಿಟ್‌ ಫಂಡ್‌ ವ್ಯವಹಾರದ ಅನುಕೂಲಕ್ಕೆ ಅಭಿವೃದ್ಧಿ ಪಡಿಸಿರುವ ಸಾಫ್ಟವೇರ್‌ ಮತ್ತು ಮೊಬೈಲ್‌ ಆಯಪ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಶನಿವಾರ ಬಿಡುಗಡೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು ರಾಜ್ಯದ ಮಹಿಳೆಯರು ಗೃಹಲಕ್ಷ್ಮಿ ದುಡ್ಡನ್ನು ಇಲ್ಲಿ ಹೂಡಿಕೆ ಮಾಡಿ ದುಪ್ಪಟ್ಟು ಹಣವನ್ನು ಗಳಿಸಬಹುದು ಎಂದು ಸಲಹೆ ನೀಡಿದ್ದಾರೆ.

ಎಂಎಸ್ ಐ ಎಲ್ ಸರ್ಕಾರಿ ಸಂಸ್ಥೆಯು ಹಲವು ದಶಕಗಳಿಂದ ಜನರ ವಿಶ್ವಾಸಕ್ಕೆ ಪಾತ್ರವಾಗಿದೆ. 2005 ರಿಂದ ಚಿಟ್ ಫಂಡ್ ವ್ಯವಸ್ಥೆ ಪ್ರಾರಂಭವಾಗಿದೆ. ಉಳಿತಾಯದ ಸಂಸ್ಕೃತಿ ಅತ್ಯವಶ್ಯ.ವಾಗಿದ್ದು, ಅಗತ್ಯ ಸಂದರ್ಭದಲ್ಲಿ ಉಳಿತಾಯದ ಹಣ ನೆರವಿಗೆ ಬರುತ್ತದೆ. ಜಾತಿವರ್ಗಗಳ ಬೇಧವಿಲ್ಲದೇ ಜಾರಿಯಾಗುವ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಗೃಹಲಕ್ಷ್ಮಿ, ಯುವನಿಧಿ, ಅನ್ನಭಾಗ್ಯ ದಿಂದ ಉಳಿತಾಯವಾಗುವ ಹಣವನ್ನು ಜನರು ವಿಶೇಷವಾಗಿ ಮಹಿಳೆಯರು ಹೂಡಿಕೆ ಮಾಡಬೇಕು ಎಂದರು.

ಜನರ ಹೂಡಿಕೆ ಭದ್ರತೆಯ ಖಾತ್ರಿ’

ಹೂಡಿಕೆ ಹಣವನ್ನು ಸುರಕ್ಷಿತವಾಗಿರುವುದು ಅತ್ಯಂತ ಅಗತ್ಯವಾಗಿದ್ದು, ಎಂಎಸ್​​​​​​​​​​​ಐಎಲ್ ನ ಚಿಟ್ ಫಂಡ್ ಈ ಭರವಸೆಯನ್ನು ನೀಡುತ್ತದೆ. ಸಾಮಾನ್ಯವಾಗಿ ನಡೆಯುವ ಚೀಟಿ ವ್ಯವಹಾರಗಳಲ್ಲಿ ಮೋಸವಾಗುವ ಸಾಧ್ಯವಿರುತ್ತದೆ. ಆದರೆ ಎಂಎಸ್ ಐ ಎಲ್, ಸರ್ಕಾರಿ ಸಂಸ್ಥೆಯಾಗಿದ್ದು, ಜನರ ಹೂಡಿಕೆಗೆ ಭದ್ರತೆಯನ್ನು ಒದಗಿಸುತ್ತದೆ. ತಮ್ಮ ಹೂಡಿಕೆಯ ಕೇವಲ ಶೇ.5 ರಷ್ಟು ಲಾಭ ಪಡೆಯುವ ಸಂಸ್ಥೆ ಜನರ ಆರ್ಥಿಕ ಭದ್ರತೆಗೆ ನೆರವಾಗಿದೆ ಎಂದು ತಿಳಿಸಿದರು.

ಕಿರುಸಾಲ ಪಡೆದ ಜನರ ರಕ್ಷಣೆಗಾಗಿ ಕಾಯ್ದೆ :

ಎಂಎಸ್ ಐ ಎಲ್ ನ ಚಿಟ್ ಫಂಡ್ ವ್ಯವಹಾರದಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತೆ ಆಧುನಿಕ ತಂತ್ರಾಂಶವನ್ನು ಇಂದು ಲೋಕಾರ್ಪಣೆಗೊಳಿಸಲಾಗಿದೆ. ಮೈಕ್ರೋ ಫೈನಾನ್ಸ್ ಗಳು ನೀಡುವ ಸಾಲದ ಸುಳಿಯಲ್ಲಿ ಅನೇಕ ಜನರು ಸಿಲುಕುತ್ತಾರೆ. ಆದ್ದರಿಂದ ಕಿರು ಸಾಲ ಮತ್ತು ಸಣ್ಣ ಸಾಲ ಅಧ್ಯಾದೇಶ 2025 ನ ರಕ್ಷಣೆ ನೀಡಲಾಗಿದೆ. ಸಾಲ ಪಡೆದ ಕಿರುಕುಳ ಅನುಭವಿಸುತ್ತಿರುವ ಜನರ ರಕ್ಷಣೆಗಾಗಿ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ ಎಂದರು.