Home latest ದಕ್ಷಿಣ ಕನ್ನಡ: ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ; ಆಂಬ್ಯುಲೆನ್ಸ್ ಚಾಲಕ ಸ್ಥಳದಲ್ಲೇ ಸಾವು

ದಕ್ಷಿಣ ಕನ್ನಡ: ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ; ಆಂಬ್ಯುಲೆನ್ಸ್ ಚಾಲಕ ಸ್ಥಳದಲ್ಲೇ ಸಾವು

Hindu neighbor gifts plot of land

Hindu neighbour gifts land to Muslim journalist

Belthangady: ತುರ್ತು ಚಿಕಿತ್ಸೆಗಾಗಿ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ (Ambulance) ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆ ಪರಿಣಾಮ ಆಂಬುಲೆನ್ಸ್ ಚಾಲಕ ಸಾವನ್ನಪ್ಪಿರುವ ಘಟನೆ ಇಂದು (ಆ. 18) ಬೆಳ್ತಂಗಡಿಯ (Belthangady) ವಗ್ಗ ಬಳಿ ನಡೆದಿದೆ. ಮೃತನನ್ನು ಮಡಂತ್ಯಾರ್ (madantyar) ಮಾಲಾಡಿ ನಿವಾಸಿ ಶಬೀರ್ ಎಂದು ಗುರುತಿಸಲಾಗಿದೆ.

ಬೆಳ್ತಂಗಡಿಯಿಂದ ಮಂಗಳೂರಿಗೆ (Mangaluru) ಚಿಕಿತ್ಸೆಗಾಗಿ ರೋಗಿಯನ್ನು ಟುಫಾನ್ ಆಂಬುಲೆನ್ಸ್ ನಲ್ಲಿ ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್ ಪಲ್ಟಿಯಾಗಿದೆ. ಘಟನೆ ಪರಿಣಾಮ ಆಂಬುಲೆನ್ಸ್ ಚಾಲಕ ಶಬೀರ್ ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದುರಾದೃಷ್ಟವಶಾತ್ ಶಬೀರ್ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ (death).