ಇನ್ಮುಂದೆ ರಾಜ್ಯದ ಸರ್ಕಾರಿ ಶಾಲಾ – ಕಾಲೇಜುಗಳಲ್ಲಿ ಕೇಸರಿ ಶಾಲು ಧರಿಸುವುದನ್ನ ನಿರ್ಬಂಧಿಸಿ ಮತ್ತು ಹಿಜಾಬ್ ಧರಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ.


ರಾಜ್ಯದ ಶೈಕ್ಷಣಿಕ (Education) ಕ್ಷೇತ್ರದಲ್ಲಿ ಹಲವು ದಿನಗಳಿಂದ ಚರ್ಚೆಯಲ್ಲಿದ್ದ ಧಾರ್ಮಿಕ ಪದ್ಧತಿಗಳ ಪಾಲನೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಅದರಲ್ಲಿ ರಾಜ್ಯದ ಸರ್ಕಾರಿ ಶಾಲಾ – ಕಾಲೇಜುಗಳಲ್ಲಿ ಕೇಸರಿ ಶಾಲು ಧರಿಸುವುದನ್ನ ನಿರ್ಬಂಧಿಸಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಹಿಜಬ್ ನಿರ್ಬಂಧಿಸಿ 2022 ರಲ್ಲಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನ ಹಿಂಪಡೆದು ಹಿಜಬ್ ಧರಿಸಲು ಅವಕಾಶ ಕಲ್ಪಿಸಿದೆ.
ಇನ್ಮುಂದೆ ರಾಜ್ಯದ ಸರ್ಕಾರಿ ಶಾಲಾ – ಕಾಲೇಜುಗಳಲ್ಲಿ ಕೇಸರಿ ಶಾಲು ಧರಿಸುವುದನ್ನ ನಿರ್ಬಂಧಿಸಿ ಮತ್ತು ಹಿಜಾಬ್ ಧರಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ.
ರಾಜ್ಯದ ಶೈಕ್ಷಣಿಕ (Education) ಕ್ಷೇತ್ರದಲ್ಲಿ ಹಲವು ದಿನಗಳಿಂದ ಚರ್ಚೆಯಲ್ಲಿದ್ದ ಧಾರ್ಮಿಕ ಪದ್ಧತಿಗಳ ಪಾಲನೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಅದರಲ್ಲಿ ರಾಜ್ಯದ ಸರ್ಕಾರಿ ಶಾಲಾ – ಕಾಲೇಜುಗಳಲ್ಲಿ ಕೇಸರಿ ಶಾಲು ಧರಿಸುವುದನ್ನ ನಿರ್ಬಂಧಿಸಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಹಿಜಬ್ ನಿರ್ಬಂಧಿಸಿ 2022 ರಲ್ಲಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನ ಹಿಂಪಡೆದು ಹಿಜಬ್ ಧರಿಸಲು ಅವಕಾಶ ಕಲ್ಪಿಸಿದೆ.
ಸರ್ವಶಿಕ್ಷಣ ಕಚೇರಿಯಲ್ಲಿ ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್ ಅವರೊಂದಿಗೆ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಇತ್ತೀಚೆಗೆ ಸಿ ಇ ಟಿ ಪರೀಕ್ಷೆ ವೇಳೆ ಜನಿವಾರದ ಘಟನೆ ನಡೆದಿತ್ತು. ಇದರಿಂದ ಮಕ್ಕಳಿಗೆ ಸಮಸ್ಯೆ ಆಗ್ತಿತ್ತು. ಮಾನಸಿಕ ಹಿಂಸೆ ಆಗ್ತಿತ್ತು. ಆದ್ದರಿಂದ ಧಾರ್ಮಿಕ ವಸ್ತ್ರಗಳಿಗೆ ಶಾಲಾ-ಕಾಲೇಜುಗಳಿಗೆ ಅವಕಾಶ ನೀಡಲಾಗಿದೆ. ಜನಿವಾರ, ಶಿವಧಾರ ಸೇರಿ ಧಾರ್ಮಿಕ ವಸ್ತುಗಳಿಗೆ ಅವಕಾಶ ನೀಡಲಾಗಿದೆ. 1-12ನೇ ತರಗತಿವರೆಗೂ ಇದು ಅನ್ವಯವಾಗಲಿದೆ. ಎಲ್ಲಾ ಧರ್ಮದ ಧಾರ್ಮಿಕ, ಸಂಪ್ರದಾಯದ ವಸ್ತುಗಳಿಗೂ ಅವಕಾಶ ಕೊಡಲಾಗಿದೆ ಎಂದು ತಿಳಿಸಿದರು.
ಅಲ್ಲದೆ ಕೇಸರಿ ಶಾಲು ಧಾರ್ಮಿಕ ಅಂತ ಬರೋದಿಲ್ಲ, ಆದ್ದರಿಂದ ಕೇಸರಿ ಶಾಲಿಗೆ ಶಾಲಾ – ಕಾಲೇಜುಗಳಲ್ಲಿ ಅವಕಾಶ ಇಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದರು. ಅಲ್ಲದೆ ಹಿಜಬ್ಗೆ ಶಾಲಾ – ಕಾಲೇಜುಗಳಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ. ವಿದ್ಯಾರ್ಥಿಗಳು ಸಾಮಾನ್ಯವಾಗಿ ಧರಿಸುವ ಪೇಟ/ಟರ್ಬನ್, ಜನಿವಾರ/ಪವಿತ್ರ ದಾರ, ಶಿವದಾರ, ರುದ್ರಾಕ್ಷಿ ತಲೆವಸ್ತ್ರ/ಹಿಜಬ್ಗೆ ಅವಕಾಶ ಕಲ್ಪಿಸಲಾಗಿದೆ. ಮಕ್ಕಳ ಪರವಾಗಿ ಈ ನಿರ್ಧಾರ ಮಾಡಲಾಗಿದೆ ಎಂದು ವಿವರಿಸಿದರು.

