Home » Forest Dept: ಗ್ಯಾಸ್ ಅಭಾವದಿಂದ ಸೌದೆ ಒಲೆಗಳತ್ತ ಜನರ ಚಿತ್ತ – ಕಟ್ಟಿಗೆಗಾಗಿ ಮರ ಕಡಿದರೆ ಶಿಕ್ಷೆ ಫಿಕ್ಸ್ ಎಂದ ಅರಣ್ಯ ಇಲಾಖೆ !!

Forest Dept: ಗ್ಯಾಸ್ ಅಭಾವದಿಂದ ಸೌದೆ ಒಲೆಗಳತ್ತ ಜನರ ಚಿತ್ತ – ಕಟ್ಟಿಗೆಗಾಗಿ ಮರ ಕಡಿದರೆ ಶಿಕ್ಷೆ ಫಿಕ್ಸ್ ಎಂದ ಅರಣ್ಯ ಇಲಾಖೆ !!

0 comments

Forest Dept: ಕೊಲ್ಲಿ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಆತಂಕದ ಕಾರಣದಿಂದಾಗಿ ಭಾರತದಲ್ಲಿ ಅಡುಗೆ ಅನಿಲದ ಅಭಾವ ಎದುರಾಗಿದೆ. ಹಲವಡೆ ಎಲ್ಪಿಜಿ ಸಿಲಿಂಡರ್ ಸಪ್ಲೈ ಇಲ್ಲದಂತಾಗಿ ಗ್ರಾಹಕರು ಪರದಾಡುವಂತಹ ಸ್ಥಿತಿ ತಲುಪಿದೆ. ಈ ಹಿನ್ನಲೆಯಲ್ಲಿ ಇದೀಗ ಜನರು ಸೌಧೆ ಒಲೆಯತ್ತ ಮುಖ ಮಾಡಿದ್ದಾರೆ. ಹೀಗಾಗಿ ಕಟ್ಟಿಗೆ ಬೇಡಿಕೆ ಏರಿಕೆಯಾಗಿದೆ. ಹೀಗಾಗಿ ಕಟ್ಟಿಗೆಗಾಗಿ ಮರ ಕಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಹೇಳಿದೆ. 

ಹೌದು, ಈ ಬೆಳವಣಿಗೆಯಿಂದ ಅಕ್ರಮ ಮರ ಕಡಿತ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಆತಂಕ ವ್ಯಕ್ತಪಡಿಸಿದ್ದು, ಹೀಗಾಗಿ ಅಕ್ರಮವಾಗಿ ಮರ ಕಡಿಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 

ಅರಣ್ಯ ಸಚಿವ ಈಶ್ವರ ಖಂಡ್ರೆ ಈ ಕುರಿತು ಆದೇಶ ಹೊರಡಿಸಿದ್ದು, ಅರಣ್ಯ ಪ್ರದೇಶಗಳ ಜೊತೆಗೆ ಸರ್ಕಾರದ ಜಾಗಗಳು, ಉದ್ಯಾನವನಗಳು ಹಾಗೂ ಇತರ ಹಸಿರು ಪ್ರದೇಶಗಳಲ್ಲಿಯೂ ಹೆಚ್ಚಿನ ನಿಗಾವಹಿಸಲು ಸೂಚಿಸಿದ್ದಾರೆ. ಎಲ್‌ಪಿಜಿ ಕೊರತೆಯಿಂದ ಮರದ ಇಂಧನ ಬಳಕೆ ಹೆಚ್ಚಾದರೆ ಪರಿಸರದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಹೆಚ್ಚುವರಿ ಪೆಟ್ರೋಲಿಂಗ್ ನಡೆಸಬೇಕು ಎಂದು ಹೇಳಿದ್ದಾರೆ.

You may also like