Home » Hampi: ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ ರಾಮಕೃಷ್ಣ!!

Hampi: ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ ರಾಮಕೃಷ್ಣ!!

0 comments

Hampi: ನಾಡಿನ ಹೆಸರಾಂತ ವಿದ್ಯಾಸಂಸ್ಥೆಯಾದ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ಪ್ರತಿಷ್ಠಿತ ನಾಡೋಜ ಪ್ರಶಸ್ತಿಯನ್ನು ಹಿರಿಯ ಚಿಂತಕರಾದ ಡಾ ಜಿ ರಾಮಕೃಷ್ಣ ಅವರು ತಿರಸ್ಕರಿಸಿದ್ದಾರೆ.

ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ (ಘಟಿಕೋತ್ಸವ) ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅವರು ನಾಡೋಜ ಗೌರವ ಪ್ರದಾನ ಮಾಡಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಮೂರು ಜನ ವಿದ್ವಾಂಸರಿಗೆ ಪ್ರಶಸ್ತಿಯನ್ನು ಪ್ರಕಟಿಸಲಾಗಿತ್ತು. ಶತಾಯುಷಿ ಪ್ರೊ ಸಿ ಮಹದೇವಪ್ಪ ಮತ್ತು ಸಾರಿಗೆ ಇಲಾಖೆಯ ನಿವೃತ್ತ ಅಧಿಕಾರಿ ಎಚ್‌ ಸಿ ಸತ್ಯನ್‌ ಅವರು ನುಡಿಹಬ್ಬದಲ್ಲಿ ಪಾಲ್ಗೊಂಡು ಪ್ರಶಸ್ತಿಯನ್ನು ಸ್ವೀಕರಿಸಿದರೆ ವಿದ್ವಾಂಸರು, ಚಿಂತಕರು ಆದ ಡಾ ಜಿ ರಾಮಕೃಷ್ಣ ಅವರು ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ.

ರಾಜ್ಯಪಾಲರ ಇತ್ತೀಚಿನ ಕೆಲವು ಧೋರಣೆ ಮತ್ತು ನಿರ್ಧಾರಗಳ ವಿರುದ್ಧ ಪ್ರತಿಭಟನಾರ್ಥವಾಗಿ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸದಿರುವ ನಿಲುವಿಗೆ ಬಂದಿರುವುದಾಗಿ ಈ ದಿನ.ಕಾಮ್‌ಗೆ ಜಿ ಆರ್‌ ಸ್ಪಷ್ಟಪಡಿಸಿದ್ದಾರೆ.

You may also like