Home » Governor : ‘ದ್ವೇಷ ಭಾಷಣ ತಡೆ ಮಸೂದೆ ‘ ರಾಷ್ಟ್ರಪತಿಗೆ ವರ್ಗಾವಣೆ!!

Governor : ‘ದ್ವೇಷ ಭಾಷಣ ತಡೆ ಮಸೂದೆ ‘ ರಾಷ್ಟ್ರಪತಿಗೆ ವರ್ಗಾವಣೆ!!

0 comments

 

Governor : ಬೆಳಗಾವಿಯಲ್ಲಿ ನಡೆದ ಚಳಿಗಾಲ ಅಧಿವೇಶನದಲ್ಲಿ ಗಲಾಟೆ-ಗದ್ದಲಗಳ ನಡುವೆ, ಚರ್ಚೆ ಇಲ್ಲದೆ ರಾಜ್ಯ ಸರ್ಕಾರವು ಉಭಯ ಸದನಗಳಲ್ಲಿ ಅಂಗೀಕರಿಸಿದ್ದ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ)ವಿಧೇಯಕ’ಕ್ಕೆ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅಂಕಿತ ಹಾಕದೆ, ರಾಷ್ಟ್ರಪತಿ ಪರಿಶೀಲನೆಗೆ ರವಾನಿಸಿದ್ದಾರೆ.

ಹೌದು, ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ)ವಿಧೇಯಕಕ್ಕೆ ರಾಜ್ಯಪಾಲರು ಸಹಿ ಹಾಕದೆ ರಾಷ್ಟ್ರಪತಿಯವರಿಗೆ ವಿಧೇಯಕದ ಪರಿಶೀಲನೆಗಾಗಿ ಕಳುಹಿಸಿದ್ದಾರೆ. ವಿಧೇಯಕಕ್ಕೆ ಸಂಬಂಧಿಸಿದಂತೆ ಒಟ್ಟು 29 ಪ್ರಮುಖ ಕಾರಣಗಳನ್ನು ಉಲ್ಲೇಖಿಸಿದ್ದು, ರಾಷ್ಟ್ರಪತಿಗೆ ರವಾನೆ ಮಾಡಿದ್ದಾರೆ. ಇದರಿಂದ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ)ವಿಧೇಯಕ’ ಮತ್ತೊಮೆ ರಾಷ್ಟ್ರಮಟ್ಟದಲ್ಲಿ ಮಹತ್ವ ಪಡೆದುಕೊಂಡಿದೆ. 

ಇನ್ನೂ ದ್ವೇಷ ಭಾಷಣದ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ ಎಂದು ರಾಜ್ಯಪಾಲರು ಹೇಳಿದ್ದು, ಈ ಅಸ್ಪಷ್ಟತೆಯಿಂದ ಧರ್ಮ, ಜಾತಿ, ಜನಾಂಗ, ವ್ಯಕ್ತಿಗಳ ಮೇಲೆ ಪೂರ್ವಾಗ್ರಹದಿಂದ ಕ್ರಮ ಜರುಗುವ ಸಾಧ್ಯತೆಯನ್ನು ಹೆಚ್ಚಿಸಲಿದೆ. ವಿಧೇಯಕವನ್ನು ಉಭಯ ಸದನಗಳಲ್ಲಿ ಸಮಗ್ರ ಚರ್ಚೆಗೆ ಒಳಪಡಿಸದೇ ಅಂಗೀಕರಿಸಲಾಗಿದೆ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟಿದ್ದಾರೆ.

banner

You may also like