Home » Uppinangady : ಬಾರ್ಯ ಗ್ರಾಮದಲ್ಲಿ ಅಕ್ರಮವಾಗಿ ಗೋಹತ್ಯೆ, ಆರೋಪಿಯ ಮನೆ ಆವರಣವನ್ನು ಜಪ್ತಿ

Uppinangady : ಬಾರ್ಯ ಗ್ರಾಮದಲ್ಲಿ ಅಕ್ರಮವಾಗಿ ಗೋಹತ್ಯೆ, ಆರೋಪಿಯ ಮನೆ ಆವರಣವನ್ನು ಜಪ್ತಿ

0 comments

Hindu neighbor gifts plot of land

Hindu neighbour gifts land to Muslim journalist

Uppinagady:  ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಪೊಸಒಕ್ಕೆಲ್ ಎಂಬಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಸಿದ ಆರೋಪದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಮನೆ ಆವರಣವನ್ನು ಜಪ್ತಿ ಮಾಡಲಾಗಿದೆ.

ಫೆ. 26ರ ರಾತ್ರಿ ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ಠಾಣೆಯ ಪಿಎಸ್‌ಐ ಸುತೇಶ್ ಕೆ.ಪಿ. ಅವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದರು. ಹೆಚ್. ಅಬ್ದುಲ್ ರಹಿಮಾನ್ ಅವರ ಮನೆ ಆವರಣಕ್ಕೆ ತಲುಪಿದಾಗ ಅಲ್ಲಿದ್ದ ಇಬ್ಬರು ವ್ಯಕ್ತಿಗಳು ಪರಾರಿಯಾಗಿದ್ದಾರೆ. ಪರಿಶೀಲನೆಯ ವೇಳೆ ಪ್ಯಾಕೆಟ್‌ಗಳಲ್ಲಿ ಸಂಗ್ರಹಿಸಲಾಗಿದ್ದ ಗೋಮಾಂಸ ಹಾಗೂ ಸಮೀಪದಲ್ಲಿದ್ದ ಆಟೋ ರಿಕ್ಷಾದಲ್ಲಿಯೂ ಮಾಂಸದ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಒಟ್ಟು 56 ಕೆಜಿ ಗೋಮಾಂಸವನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ತೂಕದ ಯಂತ್ರ, ಆಟೋ ರಿಕ್ಷಾ, ಮೊಬೈಲ್ ಫೋನ್ ಸೇರಿದಂತೆ ಇತರೆ ಸಂಬಂಧಿತ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 27/2026ರಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಜಾನುವಾರುಗಳ ವಧೆಗೆ ಬಳಸಲಾದ ಆರೋಪಿಯ ಮನೆ ಆವರಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

You may also like