ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಹಿರಂಗ ಪತ್ರವನ್ನು ಬರೆದಿದ್ದು, ಪತ್ರದಲ್ಲಿ ಮಹತ್ವದ ಸಂಗತಿಗಳನ್ನು ಉಲ್ಲೇಖ ಮಾಡಿ, RSS ಸಂಘಟನೆಯ ಕಾನೂನುಬದ್ಧ ಸ್ಥಾನಮಾನದ ಕುರಿತು ಸ್ಪಷ್ಟನೆ ಕೋರಿದ್ದರು. ಪ್ರಿಯಾಂಕ್ ಖರ್ಗೆ ಅವರ ಪತ್ರಕ್ಕೆ ಇದೀಗ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ


ಕೇರಳಂನ ತ್ರಿಶ್ಶೂರ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪ್ರಿಯಾಂಕ್ ಖರ್ಗೆ ಅವರ ಪತ್ರಕ್ಕೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿರುಗೇಟು ನೀಡಿ “ಇದೊಂದು ರಾಜಕೀಯ ಗಿಮಿಕ್, ನಮ್ಮ ಚಟುವಟಿಕೆಗಳು ರಹಸ್ಯವಾಗಿಲ್ಲ. ಹಿಂದೂ ಧರ್ಮ ಎಲ್ಲಾದರೂ ರಿಜಿಸ್ಟರ್ ಆಗಿದೆಯೇ?” ಎಂದು ಅವರು ಪ್ರಶ್ನಿಸಿದ್ದಾರೆ. ಸರ್ಕಾರಿ ಅನುದಾನ ಪಡೆಯುವವರಿಗೆ ಮಾತ್ರ ನೋಂದಣಿ ಅಗತ್ಯವಿದ್ದು, 1950ರಲ್ಲೇ ನಮ್ಮ ಸಂವಿಧಾನವನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇದಕ್ಕೆ ನಾನು ಪ್ರತಿಕ್ರಿಯಿಸುವ ಅವಶ್ಯಕತೆ ಇಲ್ಲ. ನೋಂದಣಿ ಆಗದೇ ಇರುವ ಅನೇಕ ಚಟುವಟಿಕೆಗಳು ನಡೆಯುತ್ತಲೇ ಇವೆ. ನಾವು ಕದ್ದುಮುಚ್ಚಿ ಯಾವುದೂ ಮಾಡುತ್ತಿಲ್ಲ. ನಮ್ಮ ಎಲ್ಲ ಚಟುವಟಿಕೆಗಳು ತೆರೆದ ಮೈದಾನದಲ್ಲೇ ನಡೆಯುತ್ತವೆ. ಜನರನ್ನು ಕರೆದು ಸಂಘದ ಬಗ್ಗೆ ಅವರಿಗೆ ಮುಕ್ತವಾಗಿ ತಿಳಿಸುತ್ತೇವೆ. ನಮ್ಮ ಕಾರ್ಯಕರ್ತರು ಪ್ರತಿದಿನ ಜನರ ನಡುವೆ ಇರುತ್ತಾರೆ. ಜನರು ನಮ್ಮನ್ನು ದಿನನಿತ್ಯ ನೋಡುತ್ತಾರೆ. ಹೀಗಿರುವಾಗ ನಾವು ರಹಸ್ಯವಾಗಿ ಕೆಲಸ ಮಾಡುತ್ತಿದ್ದೇವೆ ಎಂಬುದು ಸುಳ್ಳು ಎಂದು ತಿರುಗೇಟು ನೀಡಿದ್ದಾರೆ.
ಹಿಂದೂ ಧರ್ಮ ಎಲ್ಲಾದರೂ ರಿಜಿಸ್ಟರ್ ಆಗಿದೆಯೇ?
ನೋಂದಣಿಯಾಗದೆ ಪ್ರಪಂಚದಲ್ಲಿ ಅನೇಕ ವಿಷಯಗಳು ನಡೆಯುತ್ತಿವೆ. ‘ಹಿಂದೂ ಧರ್ಮ’ ಎಲ್ಲಾದರೂ ನೋಂದಣಿಯಾಗಿದೆಯೇ? ಸರ್ಕಾರದಿಂದ ನಿಧಿ ಪಡೆಯಲು ಬಯಸುವವರಿಗೆ ಮಾತ್ರ ನೋಂದಣಿಯ ಅಗತ್ಯವಿರುತ್ತದೆ ವಿನಃ ನಮಗಲ್ಲ ಎಂದು ತಿರುಗೇಟು ನೀಡಿದ್ದಾರೆ.
1950ರಲ್ಲೇ ಸಂವಿಧಾನವನ್ನು ಸರ್ಕಾರಕ್ಕೆ ನೀಡಿದ್ದೇವೆ
“ಆರ್ಎಸ್ಎಸ್ ಬ್ರಿಟಿಷರ ಕಾಲದಲ್ಲೇ ಜನರ ಇಚ್ಛೆಯಿಂದ ಪ್ರಾರಂಭವಾದ ಸಂಸ್ಥೆ. 100 ವರ್ಷಗಳಿಂದ ಯಾರೂ ನಮಗೆ ರಿಜಿಸ್ಟರ್ ಮಾಡಿ ಎಂದು ಹೇಳಿಲ್ಲ. ನಮ್ಮದೇ ಆದ ಲಿಖಿತ ಸಂವಿಧಾನ ಇದೆ. ಅದನ್ನು 1950ರ ದಶಕದಲ್ಲೇ ನಾವು ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಆಗ ಸರ್ಕಾರ ಮೊದಲು ರಿಜಿಸ್ಟರ್ ಮಾಡಿ ಆಮೇಲೆ ಸಂವಿಧಾನ ಒಪ್ಪಿಕೊಳ್ಳುತ್ತೇವೆ ಎಂದು ಹೇಳಿರಲಿಲ್ಲ” ಎಂದಿದ್ದಾರೆ.
ಅಲ್ಲದೆ “ಸರ್ಕಾರಕ್ಕೆ ಆರ್ಎಸ್ಎಸ್ ಬಗ್ಗೆ ಗೊತ್ತಿಲ್ಲ ಎಂದೇನಿಲ್ಲ. ಈ ಹಿಂದೆ ನಮ್ಮ ಮೇಲೆ ಎರಡು ಬಾರಿ ನಿಷೇಧ ಹೇರಲಾಗಿತ್ತು. ನ್ಯಾಯಾಲಯದ ಆದೇಶ ಮತ್ತು ಸತ್ಯಾಗ್ರಹಗಳ ಮೂಲಕ ಆ ನಿಷೇಧವನ್ನು ವಾಪಸ್ ಪಡೆಯಲಾಯಿತು. ನಮ್ಮನ್ನು ಬ್ಯಾನ್ ಮಾಡಿದ್ದರು ಎಂದರೆ, ಆರ್ಎಸ್ಎಸ್ ಎಂಬ ಸಂಸ್ಥೆ ಇದೆ ಎಂದು ಸರ್ಕಾರವೇ ಗುರುತಿಸಿದೆ ಎಂದರ್ಥ ” ಎಂದು ಭಾಗವತ್ ಹೇಳಿದ್ದಾರೆ.

