Home latest Congress Politics: ಸದ್ಯದಲ್ಲೇ ಭಾರತಕ್ಕೆ ಪಾಕಿಸ್ತಾನ ಸೇರ್ಪಡೆ ?! ಬಿಗ್ ಅಪ್ಡೇಟ್ ನೀಡಿದ ಬಿಜೆಪಿ ನಾಯಕ...

Congress Politics: ಸದ್ಯದಲ್ಲೇ ಭಾರತಕ್ಕೆ ಪಾಕಿಸ್ತಾನ ಸೇರ್ಪಡೆ ?! ಬಿಗ್ ಅಪ್ಡೇಟ್ ನೀಡಿದ ಬಿಜೆಪಿ ನಾಯಕ !!

Hindu neighbor gifts plot of land

Hindu neighbour gifts land to Muslim journalist

Congress Politics: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಪ್ರಕಾರ, ಆರ್ಟಿಕಲ್370 ನೇ ಬಳಿಕ -ಕಾಶ್ಮೀರ ರದ್ದು ನಮ್ಮದು ಎಂಬ ವಾತಾವರಣ ನಿರ್ಮಾಣ ಆಗುತ್ತಿದೆ, ಅಖಂಡ ಭಾರತ ನಿರ್ಮಾಣ ಆಗುತ್ತಿದೆ. ಈ ಹಿನ್ನೆಲೆ ನಾಳೆ ಪಾಕಿಸ್ತಾನ ಭಾರತದ ಜೊತೆ ಸೇರುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.

ಪಾಕಿಸ್ತಾನದಲ್ಲಿ ಮುಸ್ಲಿಂ ಆಡಳಿತ ರಾಜಕೀಯ (ರಾಜಕೀಯ) ಇದ್ದರೂ ಅನ್ನ, ನೀರು ಕೊಡಲು ಆಗ್ತಿಲ್ಲ. ಆದರೆ, ಇಲ್ಲಿ ನರೇಂದ್ರ ಮೋದಿಯಾದ ನಂತರ ಭಾರತ ಎಲ್ಲಾ ಕ್ಷೇತ್ರಗಳಲ್ಲಿ ಮೊದಲನೇ ಸ್ಥಾನಕ್ಕೆ ಹೋಗುತ್ತಿದೆ ಎಂದು ಹೇಳಿದರು.

ಹೌದು, ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರದಂತೆ ರಾಜ್ಯದಲ್ಲಿ ಭಯಭೀತ ಕೃತ್ಯಗಳು ನಡೆಯುತ್ತಲೇ ಇವೆ. ಶಾಲೆಗಳಿಗೆ, ರಾಜ ಭವನಕ್ಕೆ ಬಾಂಬ್ ಬೆದರಿಕೆ ಹಾಕಿದರೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಶಾಂತಪ್ರಿಯ ಕರ್ನಾಟಕ ಈಗ ಭಯೋತ್ಪಾದಕರು, ಕೊಲೆಗಡುಕರು, ಗೂಂಡಾಗಳ ರಾಜ್ಯವಾಗುತ್ತಿದೆ. ಅವರಿಗೆ ಕಾಂಗ್ರೆಸ್ ಸರ್ಕಾರ (ಕಾಂಗ್ರೆಸ್ ರಾಜಕೀಯ) ರಕ್ಷಣೆ ಕೊಡುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ .

ರಾಜ್ಯದಲ್ಲಿ ಗಾಂಜಾ, ಡ್ರಗ್ಸ್, ಕೊಲೆ, ಸುಲಿಗೆ, ಭಯೋತ್ಪಾದಕ ಕೃತ್ಯಗಳು ಸಲೀಸಾಗಿ ನಡೆಯುತ್ತಿವೆ. ಇದರ ಬಗ್ಗೆ ಮುಖ್ಯಮಂತ್ರಿ, ಗೃಹಮಂತ್ರಿಗೆ ಗಂಭೀರತೆ ಇಲ್ಲ. ವಿದೇಶಿ ಭಯೋತ್ಪಾದಕರ ಕೇಂದ್ರ ಸರ್ಕಾರ ಮೆಟ್ಟಿ ನಿಂತಿದೆ. ಮುಸ್ಲಿಂ ಗೂಂಡಾಗಳಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭಯ ಹುಟ್ಟಿಸಿದ್ದಾರೆ. ಆದರೆ, ಕರ್ನಾಟಕದಲ್ಲಿ ಮಾತ್ರ ಮುಸ್ಲಿಂ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಹೆದರುತ್ತಿದೆ. ಭಯೋತ್ಪಾದಕರಲ್ಲಿ ಹೆಚ್ಚು ಮುಸ್ಲಿಂಮರೇ ಇದ್ದಾರೆ. ಮುಸ್ಲಿಂ ಓಟ್ ಹೋಗುತ್ತೆ ಅಂತ ಮುಸ್ಲಿಮರನ್ನು ರಕ್ಷಣೆ ಮಾಡುತ್ತಿದ್ದಾರೆ.