Home latest ಕೆಎಸ್‌ಆರ್‌ಟಿಸಿ ಸಂಚಾರ ನಿಯಂತ್ರಕ ವಿಷ ಸೇವಿಸಿ ಬಾವಿಗೆ ಹಾರಿ ಆತ್ಮಹತ್ಯೆ

ಕೆಎಸ್‌ಆರ್‌ಟಿಸಿ ಸಂಚಾರ ನಿಯಂತ್ರಕ ವಿಷ ಸೇವಿಸಿ ಬಾವಿಗೆ ಹಾರಿ ಆತ್ಮಹತ್ಯೆ

Hindu neighbor gifts plot of land

Hindu neighbour gifts land to Muslim journalist

ವಿಷಸೇವಿಸಿ, ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಕೆಎಸ್‌ಆರ್‌ಟಿಸಿ ಸಿಬಂದಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಸೂರಿಕುಮೇರು ಪಡ್ಪು ಎಂಬಲ್ಲಿ ಮಂಗಳವಾರ ನಡೆದಿದೆ.

ಸೂರಿಕುಮೇರು ಪಡ್ಪು ನಿವಾಸಿ ಜನಾರ್ದನ ಮೂಲ್ಯ ಪಿ (54) ಮೃತಪಟ್ಟ ವ್ಯಕ್ತಿ.

ಮಂಗಳೂರು ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಟಿಸಿಯಾಗಿ ಕೆಲಸ ಮಾಡಿಕೊಂಡಿರುವ ಜನಾರ್ದನ ಅವರು ಎ.17 ರಂದು ಕೆಲಸ ಮುಗಿಸಿ ರಾತ್ರಿ ಮನೆಗೆ ಬಂದಿದ್ದರು. ಎ.18ರಂದು ಕೆಲಸಕ್ಕೆ ತೆರಳದೆ ಮನೆಯಲ್ಲಿಯೇ ಇದ್ದರು. ಮಧ್ಯಾಹ್ನದ ವೇಳೆ ಯಾವುದೋ ವಿಷ ಪದಾರ್ಥ ಸೇವಿಸಿ ಮನೆ ಹತ್ತಿರದ ಬಾವಿಗೆ ಹಾರಿದ್ದರು. ಇದನ್ನು ಕಂಡ ಅವರ ಪತ್ನಿ ರೇಣುಕಾ ಹಾಗೂ ಅವರ ಪುತ್ರ ಪ್ರಜ್ವಲ್ ಅವರು ಹಗ್ಗದ ಸಹಾಯದಿಂದ ಅವರನ್ನು ಮೇಲಕ್ಕೆತ್ತಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ದು ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಮೃತಪಟ್ಟಿದ್ದಾರೆ.