Home latest ಶಾಲೆಗೆ ಹಣೆಗೆ ಕುಂಕುಮ ಇಟ್ಟು ಬಂದ ವಿದ್ಯಾರ್ಥಿನಿ| ಮನಸೋ ಇಚ್ಛೆ ಥಳಿಸಿದ ಶಿಕ್ಷಕ !!!

ಶಾಲೆಗೆ ಹಣೆಗೆ ಕುಂಕುಮ ಇಟ್ಟು ಬಂದ ವಿದ್ಯಾರ್ಥಿನಿ| ಮನಸೋ ಇಚ್ಛೆ ಥಳಿಸಿದ ಶಿಕ್ಷಕ !!!

Hindu neighbor gifts plot of land

Hindu neighbour gifts land to Muslim journalist

ಹಣೆಯ ಮೇಲೆ ಕುಂಕುಮವಿಟ್ಟು ಶಾಲೆಗೆ ಬಂದ ವಿದ್ಯಾರ್ಥಿನಿಯರಿಗೆ ಶಾಲಾ ಶಿಕ್ಷಕ ಹೊಡೆದ ಘಟನೆಯೊಂದು ಜಮ್ಮು ಮತ್ತು ಕಾಶ್ಮೀರದ ರಾಜೇರಿ ಜಿಲ್ಲೆಯಲ್ಲಿ ನಡೆದಿದೆ.

ವಿದ್ಯಾರ್ಥಿನಿಯರಿಗೆ ಹೊಡೆದ ಶಿಕ್ಷಕನನ್ನು ನಿಸಾರ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಈ ಶಿಕ್ಷಕನನ್ನು ಇದೀಗ ರಜೌರಿ ಜಿಲ್ಲೆಯ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಅಮಾನತುಗೊಳಿಸಲಾಗಿದೆ.

ಮಿಡ್ಲ್ ಸ್ಕೂಲ್ ಖದುರಿಯನ್ ಪಂಚಾಯತ್ ಡ್ರಾಮ್ಮನ್ ನ ಇಬ್ಬರು ಯುವತಿಯರನ್ನು ಶಿಕ್ಷಕರು ಥಳಿಸಿದ ಘಟನೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಗಮನಿಸಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮಗುವನ್ನು ನೋಯಿಸುವುದು ಅಪರಾಧವಾಗಿದೆ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323, 325, 352 ಮತ್ತು 506 ರ ಅಡಿಯಲ್ಲಿ ಒಬ್ಬ ವ್ಯಕ್ತಿಯನ್ನು ಶಿಕ್ಷೆಗೆ ಹೊಣೆಗಾರರನ್ನಾಗಿ ಮಾಡಬಹುದು.

ಜುವೆನೈಲ್ ಜಸ್ಟೀಸ್ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆ, 2000 ರ ಸೆಕ್ಷನ್ 23 ಪ್ರಕಾರ, ‘ಯಾರಾದರೂ ಮಕ್ಕಳ ಮೇಲೆ ಹಲ್ಲೆ ನಡೆಸಿದರೆ, ಅವನು/ಅವಳು ಜೈಲು ಶಿಕ್ಷೆಗೆ ಗುರಿಯಾಗುತ್ತಾರೆ, ಅದು ಆರು ತಿಂಗಳವರೆಗೆ ವಿಸ್ತರಿಸಬಹುದು ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದು.

ಇದರ ಮಧ್ಯೆ, ಮುಂದಿನ ಆದೇಶದವರೆಗೆ ನಿಸಾರ್ ಅಹಮದ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.