Home latest ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಕೇಸ್‌ : ಸದ್ಯದಲ್ಲೇ ಆಸ್ಪತ್ರೆಯಿಂದ ಶಾರೀಕ್ ಡಿಸ್ಚಾರ್ಜ್‌

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಕೇಸ್‌ : ಸದ್ಯದಲ್ಲೇ ಆಸ್ಪತ್ರೆಯಿಂದ ಶಾರೀಕ್ ಡಿಸ್ಚಾರ್ಜ್‌

Hindu neighbor gifts plot of land

Hindu neighbour gifts land to Muslim journalist

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಂಕಿತ ಉಗ್ರ ಶಾರೀಕ್ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ಸದ್ಯದಲ್ಲೇ ಡಿಸ್ಚಾರ್ಜ್‌ ಮಾಡಲಾಗುತ್ತದೆ ಎಂದು ವರದಿಯಾಗಿದೆ.

ಆರೋಪಿ ಶಾರೀಕ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದ್ದು ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿದ್ದು ಮುಂದಿನ ವಾರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ.

ಶೇ. 25 ರಷ್ಟು ಸುಟ್ಟ ಗಾಯಗಳಿಂದ ಗುಣಮುಖನಾಗಿದ್ದು, ಶಾರೀಕ್ ಡಿಸ್ಚಾರ್ಜ್ ಮಾಡಲು ವೈದ್ಯರು ಮುಂದಿನ ವಾರವೇ ನಿರ್ಧರಿಸಿದ್ದಾರೆ. ಬಹುತೇಕ ಸುಟ್ಟ ಗಾಯಗಳು ವಾಸಿಯಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಿಂದ ಶಾರೀಕ್ ಡಿಸ್ಚಾರ್ಜ್ ಬಳಿಕ ಎನ್ ಐಎ ತಂಡ ಮತ್ತೆ ಕಸ್ಟಡಿಗೆ ಪಡೆಯಲಿದೆ.ಈಗಾಗಲೇ ಚಿಕಿತ್ಸೆ ಜೊತೆಗೆ ಬಹುತೇಕ ವಿಚಾರಣೆ ನಡೆಸಲಾಗಿದ್ದು,ಮಾಜ್ ಹಾಗೂ ಯಾಸೀನ್ ಜೊತೆಗಿನ ನಂಟಿನ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.