Homelatestಮಂಗಳೂರು : ರಿವೇಂಜ್ ಮರ್ಡರ್ ,ಇಬ್ಬರು ಆರೋಪಿಗಳು ಅಂದರ್

ಮಂಗಳೂರು : ರಿವೇಂಜ್ ಮರ್ಡರ್ ,ಇಬ್ಬರು ಆರೋಪಿಗಳು ಅಂದರ್

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ಬೈಕಂಪಾಡಿಯ ಮೀನಕಳಿಯದಲ್ಲಿ ನಿನ್ನೆ (ಸೋಮವಾರ ) ರಾತ್ರಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ರೌಡಿ ಶೀಟರ್ ರಾಜಾ ಯಾನೆ ರಾಘವೇಂದ್ರ ಬಂಗೇರ (29) ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೊಲೆಯಾದ ರಾಜಾನಿಗೆ ಐದು ತಿಂಗಳ ಹಿಂದೆ ವಿವಾಹವಾಗಿತ್ತು. ಕೊಲೆಯಾದ ದಿನ ಆತನ ಗರ್ಭಿಣಿ ಹೆಂಡತಿಯ ಹುಟ್ಟುಹಬ್ಬ ಆಚರಣೆ ಕೂಡಾ ಮಾಡಲಾಗಿತ್ತು.

ಏನಿದು ಘಟನೆ: ವಿವಿಧ ಪ್ರಕರಣಗಳನ್ನು ಎದುರಿಸುತ್ತಿದ್ದ ಕುಳಾಯಿಯ ರಾಜಾ ಯಾನೆ ರಾಘವೇಂದ್ರ ಸೋಮವಾರ ರಾತ್ರಿ 7.30ರ ಸುಮಾರಿಗೆ ಬೈಕಂಪಾಡಿ ಸುಪ್ರಿಯಾ ಬಾರ್ ಬಳಿಯಿಂದ ಮೀನಕಳಿಯ ರಸ್ತೆಯಾಗಿ ಹೋಗುತ್ತಿದ್ದಾಗ ಬೈಕಿನಿಂದ ಬಂದ ವ್ಯಕ್ತಿಗಳು ತಲವಾರು ಮತ್ತು ಚಾಕುವಿನಿಂದ ಮುಖ, ತಲೆ, ಕೈಗೆ ಹೊಡೆದಿದ್ದು, ರಾಜಾ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿ ಬಿದ್ದಿದ್ದ, ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎನ್ನಲಾಗಿದೆ.

RELATED ARTICLES

Most Popular

Recent Comments