Home latest ಮದುವೆಗೆಂದು ಹೋದವರು ಸೇರಿದ್ದು ಮಸಣ! ಅಪಘಾತದ ತೀವ್ರತೆಗೆ 6 ಮಂದಿ ಸ್ಥಳದಲ್ಲೇ ದುರ್ಮರಣ!!!

ಮದುವೆಗೆಂದು ಹೋದವರು ಸೇರಿದ್ದು ಮಸಣ! ಅಪಘಾತದ ತೀವ್ರತೆಗೆ 6 ಮಂದಿ ಸ್ಥಳದಲ್ಲೇ ದುರ್ಮರಣ!!!

Hindu neighbor gifts plot of land

Hindu neighbour gifts land to Muslim journalist

ಮದುವೆಯ ಶುಭ ಸಮಾರಂಭ ಮುಗಿಸಿ ಸಂತಸದಿಂದ ಹಿಂತಿರುಗುತ್ತಿರುವ ಜನರ ಮೇಲೆ ಜವರಾಯನ ದೃಷ್ಟಿ ಬಿದ್ದಿದೆ. ಮದುವೆ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದ ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಮೈಸೂರಿನಲ್ಲಿ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಲ್‌ ಬೆಟ್ಟ ಬಳಿ ಬುಧವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ

ದುರ್ಘಟನೆಯಲ್ಲಿ ಪಾಲಿಬೆಟ್ಟ ಗ್ರಾಮದ ನಿವಾಸಿಗಳಾದ ಅನಿಲ್‌, ಸಂತೋಷ್‌, ಬಾಬು ದಯಾನಂದ್‌ ಮೃತಪಟ್ಟಿದ್ದು, ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ