Home latest Purushottama Bilimale: ‘ಯಕ್ಷಗಾನ ಕಲಾವಿದರು ಸಲಿಂಗಿಗಳು’ ಹೇಳಿಕೆ ವಿಚಾರ – ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

Purushottama Bilimale: ‘ಯಕ್ಷಗಾನ ಕಲಾವಿದರು ಸಲಿಂಗಿಗಳು’ ಹೇಳಿಕೆ ವಿಚಾರ – ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

Hindu neighbor gifts plot of land

Hindu neighbour gifts land to Muslim journalist

Purushottama Bilimale: ಕನ್ನಡದ ಖ್ಯಾತ ಚಿಂತಕರಾದ ಪುರುಷೋತ್ತಮ ಬಿಳಿ ಮಲೆಯವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಮಾತನಾಡುವ ವೇಳೆ ಯಕ್ಷಗಾನ ಕಲಾವಿದರು ಬಹುತೇಕರು ಸಲಿಂಗಿಗಳು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ವಿಚಾರ ಕರಾವಳಿ ಭಾಗದಲ್ಲಿ ಸಾಕಷ್ಟು ಚರ್ಚೆಗೆ ಗುರಿಯಾಗಿ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬೆನ್ನಲ್ಲೇ ಪುರುಷೋತ್ತಮ ಬಿಳಿಮಲೆಯವರು ಕ್ಷಮೆ ಯಾಚಿಸಿದ್ದಾರೆ.

ಹೌದು, ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳಾಗಿದ್ದು, ಅಲ್ಲಿ ಅಂಥ ಅನಿವಾರ್ಯತೆ ಇದೆ ಎಂಬ ತಮ್ಮ ವಿವಾದಾತ್ಮಕ ಹೇಳಿಕೆ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕ್ಷಮೆ ಕೇಳಿದ್ದಾರೆ. 

ಅಲ್ಲದೆ ಯಕ್ಷಗಾನ ಕಲಾವಿದರು ಸಲಿಂಗಿಗಳು ಹೌದು. ಈ ವಿಚಾರವನ್ನು ನಾನು ಹೊಸದಾಗಿ ಹೇಳುತ್ತಿಲ್ಲ ಎಂದಿದ್ದಾರೆ. ನನ್ನ ಉದ್ದೇಶ ಕಲಾವಿದರ ಬದುಕು ಉಜ್ವಲಗೊಳಿಸುವುದು. ಹೀಗಾಗಿ ನನ್ನ ಹೇಳಿಕೆಯಿಂದ ಕಲಾವಿದರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ಯಕ್ಷಗಾನ ಕಲಾವಿದರು, ಅಭಿಮಾನಿಗಳಲ್ಲಿ ವಿಷಾದ ವ್ಯಕ್ತಪಡಿಸುವೆ ಎಂದಿದ್ದಾರೆ.

 ಬಿಳಿಮಲೆ ಅವರು ಹೇಳಿದ್ದೇನು?

ಮೈಸೂರಿನ ಮಾನಸಗಂಗೋತ್ರಿಯ ಪ್ರಸಾರಾಂಗದಲ್ಲಿ ಮಂಗಳವಾರ ‘ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು’ ಹಾಗೂ ‘ನಾವು ಕೂಗುವ ಕೂಗು’ ಕೃತಿಗಳನ್ನು ಬಿಡುಗಡೆ ಮಾಡಿದ ಅವರು, ಯಕ್ಷಗಾನ ಕಲಾವಿದರಲ್ಲಿ ಅನೇಕರು ಸಲಿಂಗಿಗಳು. ಅಲ್ಲಿ ಅಂಥ ಅನಿವಾರ್ಯತೆ ನಿರ್ಮಾಣವಾಗಿತ್ತು. ಕಲಾವಿದರು ಮೇಳಕ್ಕೆಂದು ಆರೆಂಟು ತಿಂಗಳು ತಿರುಗಾಟದಲ್ಲೇ ಇರುತ್ತಿದ್ದರಿಂದ ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಹೀಗಾಗಿ ಅವರಿಗೆ ಇತರರಿಗೆ ಮೋಹವೇ ಇದ್ದಿದ್ದು ಉಂಟು. ಎಷ್ಟೋ ಬಾರಿ ಸ್ತ್ರೀ ವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಣೆ ಮಾಡಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ರಂಗಭೂಮಿಯ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳುವುದಿತ್ತು. ಮೇಳದಲ್ಲಿ ಅವಕಾಶ ಇಲ್ಲದೆ ಹೋದರೆ ಬದುಕೇ ಇಲ್ಲವೆಂಬ ಒತ್ತಡಕ್ಕೆ ಕಲಾವಿದರು ಒಳಗಾಗಿರುವ ಉದಾಹರಣೆಗಳು ಸಹ ಇವೆ ಎಂದಿದ್ದಾರೆ.

ಇಷ್ಟೇ ಅಲ್ಲದೆ ‘ಅಂದಿನ ಕಾಲದಲ್ಲಿ ಕಲಾವಿದರು ಮೇಳಕ್ಕೆಂದು ಹೋಗಿ ವಾಪಸಾಗುವ ಸಂದರ್ಭದಲ್ಲಿಯೂ ಹಲವರಿಗೆ ಮನೆಯೇ ಇರುತ್ತಿರಲಿಲ್ಲ. ಪ್ರವಾಹಕ್ಕೆ ಕೊಚ್ಚಿ ಹೋಗಿರುವ ಉದಾಹರಣೆಗಳು ಸಹ ಇವೆ. ಈ ರೀತಿಯ ದುರಂತ ಕಾವ್ಯಗಳು ಅವರ ಬದುಕಿನಲ್ಲಿವೆ. ಅವನ್ನು ಗ್ರಹಿಸುವ ಶಕ್ತಿ ಸಮಾಜಕ್ಕೆ ಇಲ್ಲ. ಹಾಡಿನ ಚಪ್ಪಾಳೆಯಷ್ಟೇ ಮುಖ್ಯವಾಗಲೇ ಬಾರದು. ಯಕ್ಷಗಾನ ಕಲಾವಿದರ ಬದುಕಿನ ಬಿಕ್ಕಟ್ಟಿನ ಕಾವ್ಯಕ್ಕೆ ಅಕ್ಷರಸ್ಥರು, ವಿದ್ವಾಂಸರು ದನಿಯಾಗಬೇಕು ಎಂದು ಅವರು ಹೇಳಿದ್ದಾರೆ.