Home latest 35 ಸಾವಿರಕ್ಕೂ ಅಧಿಕ ಹಾವುಗಳಿಗೆ ಕೊಟ್ಟ ಜೀವನ, ಈಗ ಹಾವಿನಿಂದಲೇ ದೊರಕಿತು ಮರಣ !

35 ಸಾವಿರಕ್ಕೂ ಅಧಿಕ ಹಾವುಗಳಿಗೆ ಕೊಟ್ಟ ಜೀವನ, ಈಗ ಹಾವಿನಿಂದಲೇ ದೊರಕಿತು ಮರಣ !

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಆತ ಹಾವುಗಳ ಪೋಷಕ. ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಸೇರಿದಂತೆ ಆಸುಪಾಸಿನ ಜಿಲ್ಲೆಗಳಲ್ಲಿ 35 ಸಾವಿರಕ್ಕೂ ಅಧಿಕ ಹಾವುಗಳನ್ನು ರಕ್ಷಣೆ ಮಾಡಿ, ಸ್ನೇಕ್ ಲೋಕೇಶ್ ಎಂದೇ ಪ್ರಸಿದ್ಧಿ ಪಡೆದಿದ್ದ ನೆಲಮಂಗಲದ ಸ್ನೇಕ್ ಲೋಕೇಶ್ ಈಗ ಮೃತಪಟ್ಟಿದ್ದಾರೆ. ತಾನು ಜೀವನ ಕೊಟ್ಟ ಹಾವುಗಳಿಂದಲೇ ಆತ ಕಡಿತಕ್ಕೆ ಒಳಗಾಗಿ ಒಳಗಾಗಿ ದಾರುಣ ಅಂತ್ಯ ಕಂಡಿರೋದು ಮಾತ್ರ ದುರಂತ.

ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಕಳೆದ ಜುಲೈ 17ರಂದು ಸ್ನೇಕ್ ಲೋಕೇಶ್ ಬಲಗೈ ಬೆರಳಿಗೆ ವಿಷಪೂರಿತ ನಾಗರಹಾವು ಕಚ್ಚಿತ್ತು. ಮೂಟೆ ಕೆಳಗೆ ಅವಿತಿದ್ದ ಹಾವನ್ನು ಬರಿಗೈಲಿ ರಕ್ಷಿಸುವಾಗ ಅದು ಕಚ್ಚಿತ್ತು. ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ತುರ್ತು ಚಿಕಿತ್ಸೆ ಕೊಡಿಸಿ ನಂತರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ಅವರು ಇಂದು ಮೃತಪಟ್ಟಿದ್ದಾರೆ.

ಚಿಕಿತ್ಸೆ ವೇಳೆ ಲೋಕೇಶ್ ಅವರ ಮಿದುಳು ನಿಷ್ಕ್ರಿಯಗೊಂಡಿತ್ತು ಎನ್ನಲಾಗಿದೆ. ಇಲ್ಲಿಯವರೆಗೂ ಸ್ನೇಕ್ ಲೋಕೇಶ್ ಅವರು, 35 ಸಾವಿರಕ್ಕೂ ಹೆಚ್ಚು ವಿವಿಧ ಜಾತಿಯ ಉರಗಗಳು, ಪ್ರಾಣಿ, ಪಕ್ಷಿಗಳನ್ನು ರಕ್ಷಣೆ ಮಾಡಿದ್ದಾರೆ.
ನೆಲಮಂಗಲದಲ್ಲಿ ಪುಟ್ಟ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಲೋಕೇಶ್, ಕೆಲವು ಧಾರವಾಹಿ, ಕೆಲ ಚಿತ್ರಗಳಲ್ಲಿ ಕೂಡ ನಟಿಸಿದ್ದಾರೆ.