Home News ಉಡುಪಿ ಬೈಂದೂರು : ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು| ಶಾಮಿಯಾನ ಹಾಕುವಾಗ ಲೈಟಿನ ಗುಂಡುಪಿನ್ ಎದೆಗೆ...

ಬೈಂದೂರು : ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು| ಶಾಮಿಯಾನ ಹಾಕುವಾಗ ಲೈಟಿನ ಗುಂಡುಪಿನ್ ಎದೆಗೆ ತಗುಲಿ ದುರಂತ ಮೃತ್ಯು!

Hindu neighbor gifts plot of land

Hindu neighbour gifts land to Muslim journalist

ಬೈಂದೂರು: ವಿದ್ಯಾರ್ಥಿಯೊಬ್ಬ ವಿದ್ಯುತ್ ತಂತಿ ತಗಲಿದ ಪರಿಣಾಮ ಮೃತಪಟ್ಟ ಘಟನೆ ಕೆರ್ಗಾಲ್ ಗ್ರಾ.ಪಂ. ವ್ಯಾಪ್ತಿಯ ನಾಯ್ಕನಕಟ್ಟೆಯಲ್ಲಿ ಸಂಭವಿಸಿದೆ.

ವಸಂತಿ ಶೆಟ್ಟಿ ಅವರ ಪುತ್ರ ಚೇತನ್ ಶೆಟ್ಟಿ (16) ಮೃತಪಟ್ಟವರು. ಈತ ಬಿಜೂರು ಗ್ರಾಮದ ನೆಲ್ಲಿಹರು ನಿವಾಸಿ.

ಉಪ್ಪುಂದದಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಚೇತನ್ ಶೆಟ್ಟಿ ಕಾಲೇಜಿಗೆ ರಜೆ ಇರುವುದರಿಂದ ಹೊಸ್ಕೋಟೆಯಲ್ಲಿ ಶಾಮಿಯಾನ ಕೆಲಸಕ್ಕೆ ಸೇರಿಕೊಂಡಿದ್ದ. ನಾಯ್ಕನಕಟ್ಟೆ ಮನೆಯೊಂದರಲ್ಲಿ ಉಪನಯನ ಕಾರ್ಯಕ್ರಮ ಸಮಯದಲ್ಲಿ ಕಬ್ಬಿಣದ ಏಣಿಯ ಮೇಲೆ ನಿಂತು ಶಾಮಿಯಾನ ಅಳವಡಿಸುತ್ತಿರುವಾಗ ಶಾಮಿಯಾನದ ಸುತ್ತ ಹಾಕಿರುವ ಲೈಟಿಂಗ್ ವಯರ್‌ನಲ್ಲಿ ಇದ್ದ ಗುಂಡು ಪಿನ್ ಆಕಸ್ಮಿಕವಾಗಿ ಎದೆಯ ಬಳಿಗೆ ತಾಗಿ ವಿದ್ಯುತ್ ಶಾಕ್ ತಗುಲಿದ ಪರಿಣಾಮ ಕೆಳಕ್ಕೆ ಬಿದ್ದಿದ್ದಾರೆ.

ತತ್‌ಕ್ಷಣ ಯುವಕನನ್ನು ಕುಂದಾಪುರ ಆಸ್ಪತ್ರೆಗೆ ಸಾಗಿಸಲಾದರೂ, ಪರೀಕ್ಷೆ ಮಾಡಿದ ವೈದರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.