Home News ಉಡುಪಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳ

ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳ

Hindu neighbor gifts plot of land

Hindu neighbour gifts land to Muslim journalist

ಉಡುಪಿ : ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಅಗ್ನಿಶಾಮಕ ದಳದಿಂದ ರಕ್ಷಿಸಲ್ಪಟ್ಟ ಘಟನೆ ಕುಂದಾಪುರದ ತೆಕ್ಕಟ್ಟೆ ಸಮೀಪದ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ಳೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ.

ಉಳ್ಳೂರು ನಿವಾಸಿ ರತ್ನಾವತಿ ಶೆಟ್ಟಿ (52) ಬೆಳಗ್ಗೆ ಬಾವಿಯಿಂದ ನೀರೆತ್ತುವಾಗ ಆಕಸ್ಮಿಕ ಕಾಲು ಜಾರಿ 20 ಅಡಿ ಆಳದ ಬಾವಿಗೆ ಬಿದ್ದಿದ್ದಾರೆ. ತಕ್ಷಣ ಮನೆಯವರು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನಾಗರಾಜ್ ಪೂಜಾರಿ ಬಾವಿಗೆ ಇಳಿದು, ಮಹಿಳೆಯನ್ನು ರಕ್ಷಿಸಿದ್ದಾರೆ. ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಕಾರ್ಯಾಚರಣೆಯಲ್ಲಿ ಕುಂದಾಪುರ ಅಗ್ನಿಶಾಮಕ ದಳ ಠಾಣಾಧಿಕಾರಿ ಬಾಬು ಶೆಟ್ಟಿ, ಪ್ರಮುಖ ಅಗ್ನಿಶಾಮಕ ರವೀಂದ್ರ ದೇವಾಡಿಗ, ಸಿಬ್ಬಂದಿಯಾದ ಆಸಿಫ್, ಸಂತೋಷ ಶೆಟ್ಟಿ, ಅಗ್ನಿಶಾಮಕ ವಾಹನ ಚಾಲಕ ಮುಸ್ತಫ, ಸ್ಥಳೀಯರು ಪಾಲ್ಗೊಂಡಿದ್ದರು.