HomeNewsಉಡುಪಿಕಾಪು: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾಪು: ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು

Hindu neighbor gifts plot of land

Hindu neighbour gifts land to Muslim journalist

ಕಾಪು: ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ‌ ಮೃತಪಟ್ಟ ಘಟನೆ ಇನ್ನಂಜೆ‌-ಕಲ್ಲುಗುಡ್ಡೆ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೃತಪಟ್ಟ ಬೈಕ್ ಸವಾರನನ್ನು ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್ (31) ಎಂದು ಗುರುತಿಸಲಾಗಿದೆ.

ಇನ್ನಂಜೆ‌ – ಕಲ್ಲುಗುಡ್ಡೆ – ಬಂಟಕಲ್‌ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಟಿಪ್ಪರ್ ನ ಹಿಂಬದಿ ಚಕ್ರದಡಿ ಸಿಲುಕಿದ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ತಲೆಗೆ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಅಪಘಾತಕ್ಕೊಳಗಾದ ಬೈಕ್ ಮತ್ತು ಟಿಪ್ಪರ್ ಲಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

RELATED ARTICLES

Most Popular

Recent Comments