Home News ಉಡುಪಿ ಕಾರ್ಕಳ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ತಾಯಿ | ತಾಯಿಯ ಸಾವಿಗೆ ತಂದೆಯೇ ಕಾರಣ ಎಂದು...

ಕಾರ್ಕಳ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ತಾಯಿ | ತಾಯಿಯ ಸಾವಿಗೆ ತಂದೆಯೇ ಕಾರಣ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಗಳು !!

Hindu neighbor gifts plot of land

Hindu neighbour gifts land to Muslim journalist

ಮೈಮೇಲೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೆ ತನ್ನ ತಂದೆ ಹಾಗೂ ಸಂಬಂಧಿಕರ ಕಿರುಕುಳವೇ ಕಾರಣ ಎಂದು ಮಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಗೀತಾ (68) ಎಂದು ಗುರುತಿಸಲಾಗಿದೆ.

ಸುರೇಂದ್ರ ಕುಡ್ವ ಹಾಗೂ ಗೀತಾ ದಂಪತಿ ಕಾರ್ಕಳ ಕುಂಟಲ್ಪಾಡಿಯ ಅತ್ರಿ ಅಪಾರ್ಟ್ ಮೆಂಟ್‌ನಲ್ಲಿ ವಾಸವಾಗಿದ್ದು, ಅವರ ಓರ್ವ ಮಗಳನ್ನು ಮೂಡುಬಿದ್ರೆಗೆ ಮದುವೆ ಮಾಡಿ ಕೊಟ್ಟಿದ್ದರು. ಎರಡು ದಿನದ ಹಿಂದೆ ಸುರೇಂದ್ರ ಕುಡ್ವ ಹತ್ತಿರದ ಫ್ಲಾಟ್‌ನವರು ಮೂಡಬಿದ್ರೆಯಲ್ಲಿರುವ ಮಗಳಿಗೆ ಫೋನ್ ಮಾಡಿ ನಿಮ್ಮ ತಾಯಿಗೆ ಬೆಂಕಿಯಿಂದ ಸುಟ್ಟ ಗಾಯಗಳಾಗಿರುವುದಾಗಿ ತಿಳಿಸಿದರು.

ತಕ್ಷಣ ತಾಯಿ ಗೀತಾ ಅವರನ್ನು ಕಾರ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಿದ್ದಾರೆ. ಅದರಂತೆ ಅವರು ಕಾರ್ಕಳ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಕ್ಷಣ ಆಸ್ಪತ್ರೆಗೆ ಬಂದು ಮಗಳು ತನ್ನ ತಾಯಿಯಲ್ಲಿ ವಿಚಾರಿಸಿದಾಗ ತಾನೇ ಬೆಂಕಿ ಹಚ್ಚಿಕೊಂಡೆ ಎಂದು ಅವರು ತಿಳಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಬೆಳಿಗ್ಗೆ ತಾಯಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಕಾರ್ಕಳ ಠಾಣೆಗೆ ದೂರು ನೀಡಿರುವ ಪುತ್ರಿ, ತನ್ನ ತಂದೆ ಬೆಂಕಿಯ ಜ್ವಾಲೆಯಲ್ಲಿ ಸುಡುತ್ತಿದ್ದ ತನ್ನ ತಾಯಿಯನ್ನು ನೋಡಿಯೂ ಏನೂ ಮಾಡದೇ ಎದುರು ನಿಂತಿರುತ್ತಾರೆ ಎಂದು ಫ್ಲಾಟ್‌ನ ಮನೆಯವರು ಹೇಳಿರುವುದು ಅನುಮಾನ ಉಂಟುಮಾಡಿದೆ. ಫ್ಲಾಟ್‌ನ ವಿಚಾರವಾಗಿ ಬಗ್ಗೆ ತಂದೆ ಹಾಗೂ ಅವರ ತಮ್ಮಂದಿರ ವಿರುದ್ಧ ಪ್ರಕರಣ ದಾಖಲಾಗಿದೆ.

ಆದ್ದರಿಂದ ತಾಯಿಗೆ ಮಾನಸಿಕ ಕಿರುಕುಳ ಕೊಟ್ಟು ಈ ರೀತಿ ಮಾಡಿಕೊಳ್ಳುವ ಹಾಗೂ ತಂದೆ ಹಾಗೂ ಮನೆಯವರು ಪ್ರೇರೇಪಿಸಿರುವುದು ಸತ್ಯ. ಆದ್ದರಿಂದ ತಂದೆ ಸುರೇಂದ್ರ ಕುಡ್ವ, ಮತ್ತು ಅವರ ತಮ್ಮಂದಿರಾದ ನಿತ್ಯಾನಂದ ಕುಡ್ವ, ವಿಜೇಂದ್ರ ಕುಡ್ವ, ಮುಕುಂದ ಕುಡ್ವ, ಹಾಗೂ ತಂಗಿ ಪುಷ್ಪಲತಾ ಮೇಲೆ ಅನುಮಾನ ಇದೆ ಎಂದು ದೂರಿನಲ್ಲಿ ದಾಖಲಾಗಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.