Home News ಉಡುಪಿ Udupi: ಉಡುಪಿ: ಅಪ್ರಾಪ್ತ ಬಾಲಕಿಗೆ ಮದುವೆ ಆಗುವುದಾಗಿ ಹೇಳಿ ಲಾಡ್ಜ್ ಗೆ ಕರೆದೊಯ್ದ ಯುವಕ

Udupi: ಉಡುಪಿ: ಅಪ್ರಾಪ್ತ ಬಾಲಕಿಗೆ ಮದುವೆ ಆಗುವುದಾಗಿ ಹೇಳಿ ಲಾಡ್ಜ್ ಗೆ ಕರೆದೊಯ್ದ ಯುವಕ

Hindu neighbor gifts plot of land

Hindu neighbour gifts land to Muslim journalist

 

Udupi: ಯುವಕನೋರ್ವ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್ ನಲ್ಲಿ ಕರೆದುಕೊಂಡು ಹೋಗಿ ರೆಡ್ಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ.

ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘದ ಉಡುಪಿ ಜಿಲ್ಲಾಧ್ಯಕ್ಷ, ಕಟಪಾಡಿಯ ಬಿಜೆಪಿ ಮುಖಂಡನ ಪುತ್ರ, ಕಟಪಾಡಿ ಮಣಿಪುರದ ನಿವಾಸಿ, ಫೈಬರ್ ಡೋರ್ ನಿರ್ಮಿಸುವ ಕೆಲಸ ನಿರ್ವಹಿಸುತ್ತಿದ್ದ ಶ್ರೀಶಾಂತ್ ಪೂಜಾರಿ (20) ಅಪ್ರಾಪ್ತ ಬಾಲಕಿಯನ್ನು ಮಣಿಪಾಲದ ಲಾಡ್ಜ್‌ಗೆ ಕರೆದುಕೊಂಡು ಹೋದ ವಿಚಾರ ಮಾಹಿತಿ ತಿಳಿದು ಬಾಲಕಿಯ ಪೋಷಕರು ನೇರವಾಗಿ ಲಾಡ್ಜ್‌ಗೆ ಪೊಲೀಸರೊಂದಿಗೆ ದಾಳಿ ಮಾಡಿದ್ದಾರೆ.

ಲಾಡ್ಜ್‌ಗೆ ಬಾಲಕಿಯ ನಕಲಿ ಆಧಾರ್ ಕಾರ್ಡ್ ನೀಡಿ ಕರೆದುಕೊಂಡು ಹೋಗಿ ರೆಡ್ಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಶ್ರೀಶಾಂತ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಮಾಹಿತಿ ತಿಳಿದ ಇನ್ನೋರ್ವ ಬಾಲಕಿ ಕೂಡ ತನಗೂ ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದ ಶ್ರೀಶಾಂತ್ ವಿರುದ್ಧ ಉಡುಪಿ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ.

ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.