Home latest ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಯುವತಿಯ ಮೇಲೆ ಆಸಿಡ್ ದಾಳಿ ಪ್ರಕರಣದ ಆರೋಪಿ ನಾಗೇಶ್ ಬೈಕ್ ಪತ್ತೆ!

ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಯುವತಿಯ ಮೇಲೆ ಆಸಿಡ್ ದಾಳಿ ಪ್ರಕರಣದ ಆರೋಪಿ ನಾಗೇಶ್ ಬೈಕ್ ಪತ್ತೆ!

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಯುವತಿಯ ಮೇಲೆ ಆಸಿಡ್ ದಾಳಿ ಪ್ರಕರಣದ ಆರೋಪಿಯ ಪತ್ತೆಗಾಗಿ ಪೊಲೀಸರ ತಂಡ ಬಲೆಬೀಸುತ್ತಲೇ ಇದ್ದು,ಇದೀಗ ಪರಾರಿಯಾಗಿರುವಂತಹ ಕಿರಾತಕ ನಾಗೇಶ್ ಬೈಕ್ ಮೆಜೆಸ್ಟಿಕ್ ಬಳಿಯಲ್ಲಿ ಪತ್ತೆಯಾಗಿದೆ

ಯುವತಿಯನ್ನ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ ಈ ಪಾಗಲ್ ಪ್ರೇಮಿ ಯಾವಾಗ ಯುವತಿ ಈತನ ಪ್ರೀತಿ ನಿರಾಕರಿಸಿದ್ದಾಳೊ ಆಗ ಸಿಟ್ಟುಗೊಂಡು ಆಕೆಯ ಮೇಲೆ ಆ್ಯಸಿಡ್ ಎರಚಿದ್ದಾನೆ.ಯುವತಿ ಕೆಲಸಕ್ಕೆಂದು ಮುತ್ತೂಟ್ ಫಿನ್ ಕಾರ್ಪ್ ಬಳಿ ಬಂದಾಗ ಈ ಘಟನೆ ಸಂಭವಿಸಿತ್ತು.ಸದ್ಯ ಯುವತಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದು, ಚಿಕಿತ್ಸೆ ಮುಂದುವರೆದಿದೆ.

ಆದರೆ ನಾಗೇಶ್ ಇನ್ನೂ ಪತ್ತೆಯಾಗಿಲ್ಲ,ಆತನ ಪತ್ತೆಗಾಗಿ 10 ಪೊಲೀಸರ ತಂಡಗಳು ಹುಡುಕಾಟ ನಡೆಸುತ್ತಿವೆ.ತಿರುಪತಿ, ತಮಿಳುನಾಡಿನ ದೇವಸ್ಥಾನಗಳಲ್ಲಿಯೂ ಕಿರಾತಕ ನಾಗೇಶ್ ಬಂಧನಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಇದೇ ವೇಳೆಯಲ್ಲಿ ಆರೋಪಿ ನಾಗೇಶ್ ಆಯಸಿಡ್ ದಾಳಿಯ ಬಳಿಕ, ಬೈಕ್ ಮೆಜೆಸ್ಟಿಕ್ ನಲ್ಲಿನ ಪಾರ್ಕಿಂಗ್ ಸ್ಥಳದಲ್ಲಿ ಬಿಟ್ಟು ಪರಾರಿಯಾಗಿರೋದಾಗಿ ತಿಳಿದು ಬಂದಿದೆ. ಆತನ ಬೈಕ್ ಮೆಜೆಸ್ಟಿಕ್ ನಲ್ಲಿ ಪತ್ತೆಯಾಗಿದ್ದರಿಂದ ಪೊಲೀಸರು ಈಗ ಮತ್ತಷ್ಟು ತನಿಖೆ ಚುರುಕುಗೊಳಿಸಿದ್ದು, ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.