HomeNewsಬೆಳ್ತಂಗಡಿ: ಸಿಡಿಮದ್ದು ಸ್ಫೋಟಗೊಂಡು ಬಾಲಕನಿಗೆ ಗಾಯ

ಬೆಳ್ತಂಗಡಿ: ಸಿಡಿಮದ್ದು ಸ್ಫೋಟಗೊಂಡು ಬಾಲಕನಿಗೆ ಗಾಯ

Hindu neighbor gifts plot of land

Hindu neighbour gifts land to Muslim journalist

ಬೆಳ್ತಂಗಡಿ : ಪೆ.18 (ಬುಧವಾರ) ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದ ಬೈಪಾಡಿಯಲ್ಲಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಬೈಪಾಡಿ ಬಲಿಪೆ ನಿವಾಸಿ ಮುಕುಂದ ಮತ್ತು ಜಯಶ್ರೀ ದಂಪತಿಯ ಪುತ್ರ ಅಭೀಶ್ (11) ಎಂಬಾತನೇ ಗಾಯಗೊಂಡ ಬಾಲಕ. ಅಂಗಳದಲ್ಲಿ ಮಕ್ಕಳಿಬ್ಬರು ಆಟವಾಡುತ್ತಿದ್ದ ವೇಳೆ ಪತ್ತೆಯಾದ ಚೆಂಡಿನಂಥ ವಸ್ತುವೊಂದನ್ನು ಹೆಕ್ಕಿಕೊಂಡು ಬಂದು ಬಾಲಕರಿಬ್ಬರು ಕ್ರಿಕೆಟ್ ಆಟವಾಡಿದ್ದಾರೆ. ಆದರೆ ಆ ಚೆಂಡು ಕಾಡು ಪ್ರಾಣಿ ಬೇಟೆಗೆ ಬಳಸಿರುವ ಸ್ಫೋಟಕ ಎಂಬ ಶಂಕೆಯನ್ನು ಮನೆಯವರು ವ್ಯಕ್ತಪಡಿಸಿದ್ದಾರೆ, ತೋಟದಲ್ಲಿ ಇದ್ದ ಸ್ಫೋಟಕವನ್ನು ನಾಯಿ ಮನೆಯ ಅಂಗಳಕ್ಕೆ ತಂದಿರಬಹಯದು ಅದು ಚೆಂಡಿನ ಆಕಾರದಲ್ಲಿ ಇದ್ದು ಮಕ್ಕಳು ಕ್ರಿಕೆಟ್ ಆಟಕ್ಕೆ ಬಳಸಿದ್ದು ಆಟವಾಡುವ ಸಂದರ್ಭ ಸ್ಫೋಟವಾಗಿದೆ.

ಓರ್ವನ ಕಾಲಿನ ಭಾಗಕ್ಕೆ ಗಾಯವಾಗಿದ್ದು ತಕ್ಷಣ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಣ್ಣಪುಟ್ಟ ಗಾಯದಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಸ್ಫೋಟಕ ಇಟ್ಟವರ ವಿರುದ್ಧ ಕ್ರಮಕೈಗೊಳ್ಳಲು ಮನೆಯವರು ಒತ್ತಾಯಿಸಿದ್ದಾರೆ.

RELATED ARTICLES

Most Popular

Recent Comments