Hassan: ಹಾಸನದಲ್ಲಿ 8 ವರ್ಷಗಳ ಹಿಂದೆಯೇ ಮದುವೆಯಾಗಿದ್ದ ಮಹಿಳೆ ತನ್ನ ಗಂಡನನ್ನು ಬಿಟ್ಟು ರಾತ್ರೋ ರಾತ್ರಿ ಲವರ್ ಜೊತೆ ಪರಾರಿಯಾಗಿದ್ದು, ಕಾರಿನಲ್ಲೇ ಪ್ರಿಯಕರನ ಕೈಯಿಂದ ತಾಳಿ ಕಟ್ಟಿಸಿಕೊಂಡಿರುವ ಘಟನೆ ನಡೆದಿತ್ತು.


ಪತಿಯನ್ನು ಮುಕುಂದೂರು ಗ್ರಾಮದ ಪ್ರಕಾಶ್ ಹಾಗೂ ಪತ್ನಿಯನ್ನು ಅರಕಲಗೂಡು (Arkalgud) ತಾಲ್ಲೂಕಿನ ಮುಂಡಗೋಡು ಗ್ರಾಮದ ಹರ್ಷಿತಾ ಎಂದು ಗುರುತಿಸಲಾಗಿದ್ದು, ಪ್ರಿಯಕನ ಜೊತೆ ಮದುವೆಯಾದ ಗೃಹಿಣಿ ಎಂದು ತಿಳಿದುಬಂದಿದೆ. ಆದರೆ ಇದೀಗ ಹರ್ಷಿತಾ ತನಗೆ ಮೊದಲ ಪತಿ ಬೇಕು ಬಂಧು ಕರೆದುಕೊಂಡು ಹೋಗಿ ಎಂದು ಹೇಳಿದ್ದಾಳೆ ಎನ್ನಲಾಗಿದೆ.
ಹರ್ಷಿತಾಗೆ 2017ರಲ್ಲಿ ಪ್ರಕಾಶ್ ಅವರೊಂದಿಗೆ ವಿವಾಹವಾಗಿತ್ತು. ಪ್ರಕಾಶ್ ಅವರು ಹರ್ಷಿತಾ ಅವರ ಅತ್ತೆಯ ಮಗನಾಗಿದ್ದು, ದಂಪತಿಗೆ ಏಳು ವರ್ಷದ ಗಂಡು ಮಗನಿದ್ದಾನೆ. ಹೀಗಿರುವಾಗ ಒಮ್ಮೆ ಹರ್ಷಿತಾಳ ಬಣ್ಣ ಬಯಲಾದಾಗ ಪ್ರಕಾಶ್, ಪತ್ನಿಯ ತಪ್ಪನ್ನು ಕ್ಷಮಿಸಿ ಮನೆಗೆ ಕರೆದುಕೊಂಡು ಬಂದಿದ್ದರು. ಒಂದು ದಿನವಷ್ಟೇ ಪತಿ ಮನೆಯಲ್ಲಿದ್ದು, ಮರು ದಿನವೇ ಪ್ರಿಯಕರನ ಜತೆ ಹರ್ಷಿತಾ ಪರಾರಿಯಾಗಿದ್ದಳು, ಇದೀಗ ತನ್ನನ್ನು ವಾಪಸ್ ಕರೆದುಕೊಂಡು ಹೋಗುವಂತೆ ಮೊದಲ ಪತಿಯಲ್ಲಿ ಅಳಲು ತೋಡಿಕೊಂಡಿದ್ದಾಳೆ.
