Home News Bengaluru :ರಸ್ತೆ ಮಾಡಲು ತನ್ನ ಮರ ಕಡಿದಿದ್ದಕ್ಕೆ ವಿಧಾನಸೌಧ ಮುಂಭಾಗ ಇರೋ ಶ್ರೀಗಂಧ ಮರ ಕತ್ತರಿಸಿದ...

Bengaluru :ರಸ್ತೆ ಮಾಡಲು ತನ್ನ ಮರ ಕಡಿದಿದ್ದಕ್ಕೆ ವಿಧಾನಸೌಧ ಮುಂಭಾಗ ಇರೋ ಶ್ರೀಗಂಧ ಮರ ಕತ್ತರಿಸಿದ ರೈತ!!

Hindu neighbor gifts plot of land

Hindu neighbour gifts land to Muslim journalist

Bengaluru : ಹೆದ್ದಾರಿ ನಿರ್ಮಾಣಕ್ಕೆ ತಮ್ಮ ತೋಟದಲ್ಲಿದ್ದ ಶ್ರೀಗಂಧದ ಮರಗಳನ್ನು ಕಡಿದಿದ್ದು, ಅದಕ್ಕೆ ಪರಿಹಾರ ನೀಡಲು ವಿಳಂಬ ಮಾಡಲಾಗುತ್ತಿದೆ ಎಂದು ರೈತ ಹಾಗೂ ಶ್ರೀಗಂಧ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎನ್‌.ವಿಶುಕುಮಾರ್ ಅವರು ವಿಧಾನಸೌಧ ಹೊರಾವರಣದಲ್ಲಿರುವ ಶ್ರೀಗಂಧದ ಮರದ ಕೊಂಬೆ ಕಡಿದಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸಲುವಾಗಿ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹಳಿಯೂರು ಗ್ರಾಮದಲ್ಲಿ ವಿಶುಕುಮಾರ್ ಸೇರಿ 21 ರೈತರಿಗೆ ಸೇರಿದ 3.55 ಎಕರೆ ಜಾಗದಲ್ಲಿ 3 ಸಾವಿರಕ್ಕೂ ಅಧಿಕ ಶ್ರೀಗಂಧ ಮರಗಳನ್ನು ತೆರವುಗೊಳಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸ್ವಾಧೀನಪಡಿಸಿಕೊಳ್ಳಲಾದ ಭೂಮಿಯಲ್ಲಿದ್ದ ಶ್ರೀಗಂಧ ಮರಗಳಿಗೆ 150 ಕೋಟಿ ರು. ಪರಿಹಾರ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಪತ್ರ ಬರೆದಿದ್ದರು. ಅಲ್ಲದೆ, ಪರಿಹಾರ ವಿತರಣೆಗೆ ನ್ಯಾಯಾಲಯ ಸಹ ಆದೇಶಿಸಿದೆ. ಹೀಗಿದ್ದರೂ ಜಮೀನಿನಲ್ಲಿ 3 ಸಾವಿರ ಮರಗಳ ಬದಲು 850 ಗಿಡಗಳಿದ್ದವು ಎಂದು ತಪ್ಪು ಲೆಕ್ಕ ನೀಡಿ ಕೆಲ ಅಧಿಕಾರಿಗಳು ಅನ್ಯಾಯ ಮಾಡುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಮನವಿ ಮಾಡಲಾಗಿದೆ. ಆದರೆ ನಮಗೆ ನ್ಯಾಯ ಸಿಕ್ಕಿಲ್ಲ ಎಂದು ವಿಶುಕುಮಾರ್ ಅಲವತ್ತುಕೊಂಡಿದ್ದಾರೆ.

ಹೀಗಾಗಿ ವಿಧಾನಸೌಧ ಪಶ್ಚಿಮ ಪ್ರವೇಶ ದ್ವಾರ ಸಮೀಪದಲ್ಲಿದ್ದ ಶ್ರೀಗಂಧದ ಮರದ ಕೊಂಬೆಯನ್ನು ಮಧ್ಯಾಹ್ನ 12.30ರ ಸುಮಾರಿಗೆ ವಿಶುಕುಮಾರ್ ಕಡಿದಿದ್ದಾರೆ. ಕೂಡಲೇ ಅವರನ್ನು ಭದ್ರತೆಯಲ್ಲಿದ್ದ ಪೊಲೀಸರು ವಶಕ್ಕೆ ಪಡೆದು ವಿಧಾನಸೌಧ ಠಾಣೆಗೆ ಕರೆತಂದಿದ್ದಾರೆ. ನಂತರ ಅವರ ವಿರುದ್ಧ ಅರಣ್ಯ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ ವಿಧಾನಸೌಧ ಠಾಣೆ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿ ವಿಶುಕುಮಾರ್ ಅವರನ್ನು ಕಳುಹಿಸಿದ್ದಾರೆ.