Home » ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ, ಸಾಮೂಹಿಕ ರಾಜೀನಾಮೆಗೆ ಮುಂದಾದ ಕಾಂಗ್ರೆಸ್‌ ಕಾರ್ಯಕರ್ತರು

ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ, ಸಾಮೂಹಿಕ ರಾಜೀನಾಮೆಗೆ ಮುಂದಾದ ಕಾಂಗ್ರೆಸ್‌ ಕಾರ್ಯಕರ್ತರು

0 comments

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಸರಕಾರ ಆಡಳಿತ ನಡೆಸುವ ಮೊದಲೇ ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಕಾಂಗ್ರಸ್‌ನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಸಮರ್ಥ ನಾಯಕನಾಗಿ ತಕ್ಕ ಜವಾಬ್ದಾರಿ ನೀಡುವಲ್ಲಿ ಕಾಂಗ್ರೆಸ್‌ ವಿಫಲಗೊಂಡಿದೆ ಎಂದು ರಾಮಲಿಂಗಾ ರೆಡ್ಡಿ ಬೆಂಬಲಿಗರು ಆಕ್ರೋಶ ಹೊರಹಾಕಿದ್ದು, ಸಾಮೂಹಿಕ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್‌ ಕಾರ್ಯಕರ್ತರು ಘೋಷಿಸಿದ್ದಾರೆ.

ರಾಮಲಿಂಗಾ ರೆಡ್ಡಿಗೆ ಅನ್ಯಾಯ ಮಾಡಿದ್ದಾರೆ. ಇದು ನಮಗೆ ತೀವ್ರ ನೋವಾಗಿ. ಬೆಂಗಳೂರಿನ ಇಂಚಿಂಚೂ ಗೊತ್ತಿರುವ ನಾಯಕ ರಾಮಲಿಂಗಾ ರೆಡ್ಡಿ. ಬೆಂಗಳೂರು ನಗರದ ಅಭಿವೃದ್ಧಿಯಲ್ಲಿ ರಾಮಲಿಂಗಾ ರೆಡ್ಡಿ ಕೊಡುಗೆ ಮಹತ್ವವಾಗಿದೆ. ಇದೀಗ ರಾಮಲಿಂಗಾ ರೆಡ್ಡಿಗೆ ಅನ್ಯಾಯವಾಗಿದೆ. ಇದರಿಂದ ಕಾಂಗ್ರೆಸ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ರಾಮಲಿಂಗಾ ರೆಡ್ಡಿ ರಾಜೀನಾಮೆ ಕುರಿತು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಪ್ರತಿಕ್ರಿಯಿಸಿದ್ದು, ನಾವು ಮಾತನಾಡಿ ಸಮಸ್ಯೆ ಬಗೆ ಹರಿಸುತ್ತೇವೆ. ಇಂದು ನಾಮಪತ್ರ ಸಲ್ಲಿಕೆ ಇರುವ ಕಾರಣ ಮೊದಲು ಕೆಲಸ ಮುಗಿಸಿ ಅವರ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ. ರಾಮಲಿಂಗಾ ರೆಡ್ಡಿ ಹಿರಿಯ ನಾಯಕರು, ಅವರ ಜೊತೆ ಮಾತನಾಡಿ ಸಮಸ್ಯೆ ಕ್ಲೀಯರ್ ಮಾಡುತ್ತೇವೆ ಎಂದಿದ್ದಾರೆ.

 

banner

You may also like