Home News Putturu: ಎರಡೂವರೆ ವರ್ಷದ ಹಿಂದೆ ಬೈಕ್‌ ಡಿಕ್ಕಿಯಾಗಿ ಮಹಿಳೆ ಸಾವನನಪ್ಪಿದ ಪ್ರಕರಣ – ಸವಾರನಿಗೆ...

Putturu: ಎರಡೂವರೆ ವರ್ಷದ ಹಿಂದೆ ಬೈಕ್‌ ಡಿಕ್ಕಿಯಾಗಿ ಮಹಿಳೆ ಸಾವನನಪ್ಪಿದ ಪ್ರಕರಣ – ಸವಾರನಿಗೆ ದಂಡ, ಮಾಲೀಕನಿಗೆ 2 ವರ್ಷ ಜೈಲು !!

Hindu neighbor gifts plot of land

Hindu neighbour gifts land to Muslim journalist

Putturu: ಪುತ್ತೂರು ತಾಲ್ಲೂಕಿನಲ್ಲಿ ಎರಡೂವರೆ ವರ್ಷದ ಹಿಂದೆ ಬೈಕ್‌ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನ್ಯಾಯಾಲಯವು ತೀರ್ಪು ನೀಡಿದೆ.

ಹೌದು, ಪುತ್ತೂರು(Putturu) ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಕೊಟ್ಯಾಡಿಯಲ್ಲಿ ಎರಡೂವರೆ ವರ್ಷದ ಹಿಂದೆ ಬೈಕ್‌ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನ್ಯಾಯಾಲಯವು ಚಾಲನಾ ಪರವಾನಗಿ ಇಲ್ಲದೆ ಬೈಕ್ ಚಲಾಯಿಸಿದ್ದ ಆರೋಪಿ ಬೈಕ್ ಸವಾರನಿಗೆ ದಂಡ ಮತ್ತು ಬೈಕ್ ಮಾಲೀಕನಿಗೆ 2 ವರ್ಷ ಜೈಲು ವಿಧಿಸಿದೆ.

ಪ್ರಕರಣದ ಕುರಿತು ವಿಚಾರಣೆ ನಡೆಸಿದ ಪುತ್ತೂರಿನ ಹೆಚ್ಚುವರಿ ಹಿರಿಯ ವ್ಯಾವಹಾರಿಕ ನ್ಯಾಯಾಧೀಶ ದೇವರಾಜ್ ವೈ.ಎಚ್. ಅವರು, ಬೈಕ್ ಸವಾರ ಶಾಹಿದ್‌ಗೆ ₹ 5 ಸಾವಿರ ದಂಡ, ಬೈಕ್ ಮಾಲೀಕ ಮಹಮ್ಮದ್ ಶಾಕೀರ್‌ಗೆ 2 ವರ್ಷ ಜೈಲು, ₹ 5 ಸಾವಿರ ದಂಡ ವಿಧಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಚೇತನಾದೇವಿ ವಾದಿಸಿದ್ದರು

ಅಷ್ಟಕ್ಕೂ ಆಗಿದ್ದೇನು?
ನೆಟ್ಟಣಿಗೆ ಮುಡ್ನೂರು ಗ್ರಾಮದ ಕೊಟ್ಯಾಡಿಯಲ್ಲಿ 2022ರ ಫೆ.27ರಂದು ಕೇರಳದ ಮುಳಿಯೂರು ನಿವಾಸಿ ಶಾಹಿದ್ ಎಂಬಾತ ಚಲಾಯಿಸಿಕೊಂಡು ಹೋಗುತ್ತಿದ್ದ ಕೇರಳ ನೋಂದಣಿಯ ಬೈಕ್, ರಸ್ತೆ ಬದಿಯಲ್ಲಿ ನಿಂತಿದ್ದ ಕೊಟ್ಯಾಡಿಯ ದುಗ್ಗಮ್ಮ (55) ಎಂಬುವರಿಗೆ ಡಿಕ್ಕಿಯಾಗಿತ್ತು. ಘಟನೆಯಲ್ಲಿ ದುಗ್ಗಮ್ಮ ಮೃತಪಟ್ಟಿದ್ದರು. ಬೈಕ್ ಹಿಂಬದಿ ಸವಾರೆ ನೆಬಿಸಾ ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿ ಸಂಪ್ಯ ಠಾಣೆ ಪೊಲೀಸರು ತನಿಖೆ ನಡೆಸಿದ ವೇಳೆ ಬೈಕ್ ಸವಾರ ಶಾಹಿದ್ ಚಾಲನಾ ಪರವಾನಗಿ ಹೊಂದಿಲ್ಲ ಎಂಬುದು ತಿಳಿದು ಬಂದಿತ್ತು. ಈ ಸಂಬಂಧ ಬೈಕ್ ಮಾಲೀಕ ಮುಳಿಯಾರು ನಿವಾಸಿ ಮಹಮ್ಮದ್ ಶಾಕೀರ್ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಗಳಿಬ್ಬರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸಧ್ಯ ಈ ಪ್ರಕರಣದ ತೀರ್ಪು ಹೊರಬಿದ್ದಿದೆ.