Home News ಮರಕ್ಕೆ ಡಿಕ್ಕಿ ಹೊಡೆದ ಬೊಲೆರೋ | ದೇವರ ದರ್ಶನಕ್ಕೆಂದು ಹೋದಾಗ ಅಪಘಾತ | ಭೀಕರ ಅಪಘಾತಕ್ಕೆ...

ಮರಕ್ಕೆ ಡಿಕ್ಕಿ ಹೊಡೆದ ಬೊಲೆರೋ | ದೇವರ ದರ್ಶನಕ್ಕೆಂದು ಹೋದಾಗ ಅಪಘಾತ | ಭೀಕರ ಅಪಘಾತಕ್ಕೆ 6 ಮಂದಿ ಸಾವು

Hindu neighbor gifts plot of land

Hindu neighbour gifts land to Muslim journalist

ಬೆಳಗಾವಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಜನ ಮೃತಪಟ್ಟ ಘಟನೆ ನಡೆದಿದೆ.

ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ 6 ಮಂದಿ ಮೃತಪಟ್ಟ ಘಟನೆ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ನಡೆದಿದೆ.

ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಮೃತರನ್ನು ಹನುಮವ್ವ, ದೀಪಾ, ಸವಿತಾ, ಸುಪ್ರಿತಾ, ಮಾರುತಿ, ಇಂದಿರವ್ವ ಎಂದು ಗುರುತಿಸಲಾಗಿದೆ. ಸವದತ್ತಿ ಯಲ್ಲಮನ ದರ್ಶನಕ್ಕೆ ಹೊರಟಾಗ ಈ ದುರ್ಘಟನೆ ಸಂಭವಿಸಿದೆ.

ಮೃತ ಯಾತ್ರಾರ್ಥಿಗಳು ನಡೆದುಕೊಂಡು ಯಲ್ಲಮ್ಮ ದೇವಸ್ಥಾನಕ್ಕೆ ಹೊರಟ್ಟಿದ್ದರು. ಈ ವೇಳೆ ಪಾದಯಾತ್ರೆ ಹೊರಟವರನ್ನ ನಿಲ್ಲಿಸಿ ಬೊಲೆರೊ ವಾಹನದ ಚಾಲಕ ಡ್ರಾಪ್ ಕೊಡುವುದಾಗಿ ಹೇಳಿ ವಾಹನ ಹತ್ತಿಸಿಕೊಂಡಿದ್ದಾನೆ. ವಾಹನ ಹತ್ತಿದ ಕೆಲವೇ ನಿಮಿಷಗಳಲ್ಲಿ ರಸ್ತೆ ಅಪಘಾತವಾಗಿ ಆರು ಜನ ಮೃತಪಟ್ಟಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಎಸ್ ಪಿ ಡಾ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಭೀಕರ ಅಪಘಾತಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ.