Home News ಮತ್ತೆ ಲಾಕ್ ಡೌನ್ ನತ್ತ ಸಾಗಲಿದೆಯೇ ಕರ್ನಾಟಕ!?ರಾಜ್ಯದಲ್ಲಿ ಹೊಸ ಕೊರೋನ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಮಧ್ಯೆ...

ಮತ್ತೆ ಲಾಕ್ ಡೌನ್ ನತ್ತ ಸಾಗಲಿದೆಯೇ ಕರ್ನಾಟಕ!?ರಾಜ್ಯದಲ್ಲಿ ಹೊಸ ಕೊರೋನ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಮಧ್ಯೆ ಸ್ಪಷ್ಟನೆ ನೀಡಿದ ತಾಂತ್ರಿಕ ಸಲಹಾ ಸಮಿತಿ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ಮಹಾಮಾರಿ ಕೊರೊನಾ ರೂಪಾಂತರದ ಎವೈ 4.2 ಮತ್ತೆ ಬೆಂಗಳೂರಿನಲ್ಲಿ ಎರಡು ಪ್ರಕರಣ ಪತ್ತೆಯಾಗಿದ್ದು, ಇದರ ಬೆನ್ನಲ್ಲೆ ಕರ್ನಾಟಕದ ಎಂಬ ಸುದ್ದಿ ಎಲ್ಲೆಡೆ ಹಬ್ಬಿದ್ದು,ಈ ಬಗ್ಗೆ ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿಯು ಸ್ಪಷ್ಟನೆ ನೀಡಿದೆ.

ಕಳೆದ ಬಾರಿ ರಾಜ್ಯದೆಲ್ಲೆಡೆ ಪ್ರತಿದಿನ ಸುಮಾರು 50,000 ಕ್ಕೂ ಹೆಚ್ಚು ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗುತ್ತಿದ್ದದ್ದರಿಂದ ಲಾಕ್‌ಡೌನ್ ಶಿಫಾರಸು ಮಾಡಲಾಗಿತ್ತು. ಆದರೆ ಕಳೆದ ಎರಡು ದಿನಗಳಿಂದ ಕೊರೊನಾ ಸಂಖ್ಯೆ 350 ಕ್ಕಿಂತ ಕಡಿಮೆಯಾಗಿದೆ ಎಂದು ಟಿಎಸಿ ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್ ಹೇಳಿದ್ದಾರೆ.

ಕಳೆದ ಎರಡು ದಿನಗಳಿಂದ ಜನರಲ್ಲಿ ಭಯ ಹುಟ್ಟಿಸುವ ಸುದ್ದಿ ಹರಡಲಾಗುತ್ತಿದ್ದು, ಇದೆಲ್ಲವೂ ಆಧಾರ ರಹಿತವೆಂದು ಹಾಗೂ ಸತ್ಯಕ್ಕೆ ದೂರವಾದ ಮಾತಾಗಿದೆ ಅವರು ಹೇಳಿದ್ದಾರೆ. ಕರ್ನಾಟಕದಲ್ಲಿ ಡೆಲ್ಟಾ ರೂಪಾಂತರದ ಎವೈ 4.2 ಎರಡು ಪ್ರಕರಣಗಳು ಬೆಂಗಳೂರಿನಲ್ಲಿ ಕಂಡುಬಂದಿದ್ದು ಹೆಚ್ಚಿನ ನಿಗಾ ವಹಿಸಲಾಗಿದೆ.

ಇಡೀ ದೇಶದಲ್ಲಿ ಸುಮಾರು 17 ಪ್ರಕರಣ ಪತ್ತೆಯಾಗಿದ್ದು, ಎರಡು ಬಿಬಿಎಂಪಿ ವ್ಯಾಪ್ತಿಯಲ್ಲಿದೆ. ಇದರಿಂದ ಬಳಲುತ್ತಿದ್ದವರು ಚೇತರಿಸಿಕೊಂಡಿದ್ದಾರೆ ಎಂದು ಟಿಎಸಿ ಅಧ್ಯಕ್ಷರು ಹೇಳಿದ್ದಾರೆ. ಬೆಂಗಳೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುತ್ತಿದ್ದಾರೆ.ಭಯಪಡುವ ಅಗತ್ಯವಿಲ್ಲ. ಪೋಷಕರು ಆಧಾರ ರಹಿತ ವಿಷ್ಯವನ್ನು ನಂಬಬೇಡಿ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಎಲ್ಲಾ ವಯೋಮಾನದವರಲ್ಲಿ ಸರಾಸರಿ ಪರೀಕ್ಷಾ ಧನಾತ್ಮಕತೆಯ ದರ ಪ್ರಸ್ತುತ ಶೇಕಡಾ 0.3 ರಷ್ಟಿದೆ.ರಾಜ್ಯದೆಲ್ಲೆಡೆ ಶಾಲಾ ಕಾಲೇಜುಗಳು ಪ್ರಾರಂಭವಾಗಿದ್ದು ವಿಶೇಷವಾಗಿ ಶಾಲಾ ಮಕ್ಕಳಿಗೆ ಇದು ಶೇಕಡಾ 0.13 ರಷ್ಟಿದೆ ಎಂದವರು ಹೇಳಿದ್ದಾರೆ.ಆರೋಗ್ಯ ಸಚಿವರೊಂದಿಗಿನ ಮುಂದಿನ ಸಭೆಯಲ್ಲಿ ರಾಜ್ಯದ ಸಾಂಕ್ರಾಮಿಕ ಪರಿಸ್ಥಿತಿಯ ಬಗ್ಗೆ ವಿವರವಾದ ಚರ್ಚೆ ನಡೆಯಲಿದ್ದು, ಜನರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಡಾ.ಸುದರ್ಶನ್ ಹೇಳಿದ್ದಾರೆ.